July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಇಂದು ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಠಾಣೆಯ ಪ್ರಮೋದ್, ಕುಶಾಲಪ್ಪ ಯಂ. ಶಿವಾನಂದ, ಗಿರೀಶ್, ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿ ಸುಮಾರು 1 ರಿಂದ 2 ಗಂಟೆ ಸುಮಾರಿಗೆ, ಮೂವರು ಸೇರಿ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಮ್ಯಾಟ್ರಿಮೋನಿ ಆ್ಯಪ್‌ ಮೂಲಕ  ಪರಿಚಯವಾದ ಯುವತಿಯಿಂದ ಕೊಯ್ಯೂರಿನ ಉದ್ಯಮಿಗೆ ರೂ.87 ಲಕ್ಷ ವಂಚನೆ: ಪ್ರಕರಣ ದಾಖಲು

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya
error: Content is protected !!