September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಇಂದು ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಠಾಣೆಯ ಪ್ರಮೋದ್, ಕುಶಾಲಪ್ಪ ಯಂ. ಶಿವಾನಂದ, ಗಿರೀಶ್, ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿ ಸುಮಾರು 1 ರಿಂದ 2 ಗಂಟೆ ಸುಮಾರಿಗೆ, ಮೂವರು ಸೇರಿ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya
error: Content is protected !!