24 C
ಪುತ್ತೂರು, ಬೆಳ್ತಂಗಡಿ
June 8, 2025
ಧಾರ್ಮಿಕ

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಗೇರುಕಟ್ಟೆ : ಎ.6.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯಲ್ಲಿರುವ ಅಶ್ವಥ ಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತ್ರತ್ವದಲ್ಲಿ ಎ.5 ರಂದು ಸಂಜೆ ನಡೆಯಿತು.


ರಾತ್ರಿ ಮಹಾ ಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ: ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ವತಿಯಿಂದ ದಿ| ಶ್ರೀ ಅನಂತರಾಮ ಬಂಗಾಡಿ ವಿರಚಿತ ಕಾಡಮಲ್ಲಿಗೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಮುಂದಿನ ವರ್ಷ ಬ್ರಹ್ಮಕಲಶೋತ್ಸವವು ಜರಗಲಿರುವುದ್ದರಿಂದ ದೇವಿಗೆ ಸ್ವರ್ಣ ಕಿರೀಟವನ್ನು ಸಮರ್ಪಿಸುವ ಉದ್ಧೇಶದಿಂದ ಕಾಣಿಕೆ ಡಬ್ಬಿಯನ್ನು ಅನಾವರಣಗೊಳಿಸಿ,ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ , ಸದಸ್ಯರಾದ. ರಾಘವ ಎಚ್ ನೀನಕುಮಾರ್. ಮೋಹಿನಿ. ಹೇಮಂತ್ ಕುಮಾರ್. ಶರತ್ ಕುಮಾರ್. ಕೆ ಹರೀಶ್.,ರಿಟಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಹಾಗೂಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಗೌಡಮತ್ತು ಮತ್ತು ಸದಸ್ಯರು . ಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಸದಸ್ಯರು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!