25.5 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕ

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಗೇರುಕಟ್ಟೆ : ಎ.6.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯಲ್ಲಿರುವ ಅಶ್ವಥ ಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತ್ರತ್ವದಲ್ಲಿ ಎ.5 ರಂದು ಸಂಜೆ ನಡೆಯಿತು.


ರಾತ್ರಿ ಮಹಾ ಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ: ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ವತಿಯಿಂದ ದಿ| ಶ್ರೀ ಅನಂತರಾಮ ಬಂಗಾಡಿ ವಿರಚಿತ ಕಾಡಮಲ್ಲಿಗೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಮುಂದಿನ ವರ್ಷ ಬ್ರಹ್ಮಕಲಶೋತ್ಸವವು ಜರಗಲಿರುವುದ್ದರಿಂದ ದೇವಿಗೆ ಸ್ವರ್ಣ ಕಿರೀಟವನ್ನು ಸಮರ್ಪಿಸುವ ಉದ್ಧೇಶದಿಂದ ಕಾಣಿಕೆ ಡಬ್ಬಿಯನ್ನು ಅನಾವರಣಗೊಳಿಸಿ,ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ , ಸದಸ್ಯರಾದ. ರಾಘವ ಎಚ್ ನೀನಕುಮಾರ್. ಮೋಹಿನಿ. ಹೇಮಂತ್ ಕುಮಾರ್. ಶರತ್ ಕುಮಾರ್. ಕೆ ಹರೀಶ್.,ರಿಟಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಹಾಗೂಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಗೌಡಮತ್ತು ಮತ್ತು ಸದಸ್ಯರು . ಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಸದಸ್ಯರು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ ಉದ್ಘಾಟನೆ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

Suddi Udaya
error: Content is protected !!