23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

ಶಿರ್ಲಾಲು: ಕರಂಬಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಭರತನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮ ಎ.5ರಂದು ಜರಗಿತು.

ಹಿರಿಯ ಭರತನಾಟ್ಯ ಶಿಕ್ಷಕಿ ಉಮಾ ಮಾಧವಿ ಕೊಳಲಗಿರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಠ್ಯದೊಂದಿಗೆ ಭರತನಾಟ್ಯ, ಸಂಗೀತ ನಾಟಕ, ಯಕ್ಷಗಾನ ಮೊದಲಾದ ಕಲೆಗಳನ್ನು ಕಲಿಯುವುದರಿಂದ ಜ್ಞಾನದ ಅಭಿವೃದ್ಧಿ ಉಂಟಾಗುತ್ತದೆ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಊರಿನ ಹಿರಿಯರಾದ ನಾರಾಯಣ ಹೆಬ್ಬಾರ್ ಮತ್ತು ಕುಟುಂಬಸ್ಥರ ಶ್ರಮದ ಫಲವಾಗಿ ಈ ಶಾಲೆ ನಿರ್ಮಾಣವಾಗಿದ್ದು ಸ್ಥಳೀಯರ ಶಿಕ್ಷಣ ವ್ಯವಸ್ಥೆಗೆ ಪೂರಕ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪುಷ್ಪರಾಜ ಎಂ.ಕೆ., ಉಪಾಧ್ಯಕ್ಷೆ ವಿಜಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿವೇಕ ಕೇಳ್ಕರ್, ಶಿಕ್ಷಕಿಯರಾದ ಚೈತ್ರಾ ಕುಮಾರಿ, ಸೌಜನ್ಯಾ, ಲತಾ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ರಮೇಶ್ ಚೌಹಾನ್ ಸ್ವಾಗತಿಸಿದರು. ತಸ್ಮಿಯಾ ಪರ್ವಿನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಾಶಿವ ಕುಮಾರ್ ನಿರೂಪಿಸಿ,ಸಾವಿತ್ರಿ ಎಂ. ವಂದಿಸಿದರು.

ಒಂದರಿಂದ ಏಳು ತರಗತಿಗಳನ್ನು ಹೊಂದಿರುವ ಈ ಶಾಲೆಯಲ್ಲಿ ಸಂಗೀತ, ಯೋಗ ತರಗತಿಗಳು ನಡೆಯುತ್ತಿದ್ದು ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣವನ್ನು ನೀಡಲಾಗುತ್ತಿದೆ. ಈ ಶೈಕ್ಷಣಿಕ ವರ್ಷದಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಭರತನಾಟ್ಯ ತರಗತಿಗಳು ನಡೆಯಲಿವೆ.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya
error: Content is protected !!