27.9 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕ

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಗೇರುಕಟ್ಟೆ : ಎ.6.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯಲ್ಲಿರುವ ಅಶ್ವಥ ಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತ್ರತ್ವದಲ್ಲಿ ಎ.5 ರಂದು ಸಂಜೆ ನಡೆಯಿತು.


ರಾತ್ರಿ ಮಹಾ ಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ: ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ವತಿಯಿಂದ ದಿ| ಶ್ರೀ ಅನಂತರಾಮ ಬಂಗಾಡಿ ವಿರಚಿತ ಕಾಡಮಲ್ಲಿಗೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಮುಂದಿನ ವರ್ಷ ಬ್ರಹ್ಮಕಲಶೋತ್ಸವವು ಜರಗಲಿರುವುದ್ದರಿಂದ ದೇವಿಗೆ ಸ್ವರ್ಣ ಕಿರೀಟವನ್ನು ಸಮರ್ಪಿಸುವ ಉದ್ಧೇಶದಿಂದ ಕಾಣಿಕೆ ಡಬ್ಬಿಯನ್ನು ಅನಾವರಣಗೊಳಿಸಿ,ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ , ಸದಸ್ಯರಾದ. ರಾಘವ ಎಚ್ ನೀನಕುಮಾರ್. ಮೋಹಿನಿ. ಹೇಮಂತ್ ಕುಮಾರ್. ಶರತ್ ಕುಮಾರ್. ಕೆ ಹರೀಶ್.,ರಿಟಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಹಾಗೂಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಗೌಡಮತ್ತು ಮತ್ತು ಸದಸ್ಯರು . ಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಸದಸ್ಯರು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya
error: Content is protected !!