30.2 C
ಪುತ್ತೂರು, ಬೆಳ್ತಂಗಡಿ
June 7, 2025
ಧಾರ್ಮಿಕ

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಗೇರುಕಟ್ಟೆ : ಎ.6.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯಲ್ಲಿರುವ ಅಶ್ವಥ ಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತ್ರತ್ವದಲ್ಲಿ ಎ.5 ರಂದು ಸಂಜೆ ನಡೆಯಿತು.


ರಾತ್ರಿ ಮಹಾ ಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ: ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ವತಿಯಿಂದ ದಿ| ಶ್ರೀ ಅನಂತರಾಮ ಬಂಗಾಡಿ ವಿರಚಿತ ಕಾಡಮಲ್ಲಿಗೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಮುಂದಿನ ವರ್ಷ ಬ್ರಹ್ಮಕಲಶೋತ್ಸವವು ಜರಗಲಿರುವುದ್ದರಿಂದ ದೇವಿಗೆ ಸ್ವರ್ಣ ಕಿರೀಟವನ್ನು ಸಮರ್ಪಿಸುವ ಉದ್ಧೇಶದಿಂದ ಕಾಣಿಕೆ ಡಬ್ಬಿಯನ್ನು ಅನಾವರಣಗೊಳಿಸಿ,ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ , ಸದಸ್ಯರಾದ. ರಾಘವ ಎಚ್ ನೀನಕುಮಾರ್. ಮೋಹಿನಿ. ಹೇಮಂತ್ ಕುಮಾರ್. ಶರತ್ ಕುಮಾರ್. ಕೆ ಹರೀಶ್.,ರಿಟಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಹಾಗೂಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಗೌಡಮತ್ತು ಮತ್ತು ಸದಸ್ಯರು . ಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಸದಸ್ಯರು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya
error: Content is protected !!