ಧಾರ್ಮಿಕ

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಗೇರುಕಟ್ಟೆ : ಎ.6.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯಲ್ಲಿರುವ ಅಶ್ವಥ ಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತ್ರತ್ವದಲ್ಲಿ ಎ.5 ರಂದು ಸಂಜೆ ನಡೆಯಿತು.


ರಾತ್ರಿ ಮಹಾ ಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ: ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ವತಿಯಿಂದ ದಿ| ಶ್ರೀ ಅನಂತರಾಮ ಬಂಗಾಡಿ ವಿರಚಿತ ಕಾಡಮಲ್ಲಿಗೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಮುಂದಿನ ವರ್ಷ ಬ್ರಹ್ಮಕಲಶೋತ್ಸವವು ಜರಗಲಿರುವುದ್ದರಿಂದ ದೇವಿಗೆ ಸ್ವರ್ಣ ಕಿರೀಟವನ್ನು ಸಮರ್ಪಿಸುವ ಉದ್ಧೇಶದಿಂದ ಕಾಣಿಕೆ ಡಬ್ಬಿಯನ್ನು ಅನಾವರಣಗೊಳಿಸಿ,ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ , ಸದಸ್ಯರಾದ. ರಾಘವ ಎಚ್ ನೀನಕುಮಾರ್. ಮೋಹಿನಿ. ಹೇಮಂತ್ ಕುಮಾರ್. ಶರತ್ ಕುಮಾರ್. ಕೆ ಹರೀಶ್.,ರಿಟಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಹಾಗೂಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಗೌಡಮತ್ತು ಮತ್ತು ಸದಸ್ಯರು . ಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಸದಸ್ಯರು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

Suddi Udaya

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya
error: Content is protected !!