23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

ಶಿರ್ಲಾಲು: ಕರಂಬಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಭರತನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮ ಎ.5ರಂದು ಜರಗಿತು.

ಹಿರಿಯ ಭರತನಾಟ್ಯ ಶಿಕ್ಷಕಿ ಉಮಾ ಮಾಧವಿ ಕೊಳಲಗಿರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಠ್ಯದೊಂದಿಗೆ ಭರತನಾಟ್ಯ, ಸಂಗೀತ ನಾಟಕ, ಯಕ್ಷಗಾನ ಮೊದಲಾದ ಕಲೆಗಳನ್ನು ಕಲಿಯುವುದರಿಂದ ಜ್ಞಾನದ ಅಭಿವೃದ್ಧಿ ಉಂಟಾಗುತ್ತದೆ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಊರಿನ ಹಿರಿಯರಾದ ನಾರಾಯಣ ಹೆಬ್ಬಾರ್ ಮತ್ತು ಕುಟುಂಬಸ್ಥರ ಶ್ರಮದ ಫಲವಾಗಿ ಈ ಶಾಲೆ ನಿರ್ಮಾಣವಾಗಿದ್ದು ಸ್ಥಳೀಯರ ಶಿಕ್ಷಣ ವ್ಯವಸ್ಥೆಗೆ ಪೂರಕ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪುಷ್ಪರಾಜ ಎಂ.ಕೆ., ಉಪಾಧ್ಯಕ್ಷೆ ವಿಜಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿವೇಕ ಕೇಳ್ಕರ್, ಶಿಕ್ಷಕಿಯರಾದ ಚೈತ್ರಾ ಕುಮಾರಿ, ಸೌಜನ್ಯಾ, ಲತಾ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ರಮೇಶ್ ಚೌಹಾನ್ ಸ್ವಾಗತಿಸಿದರು. ತಸ್ಮಿಯಾ ಪರ್ವಿನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಾಶಿವ ಕುಮಾರ್ ನಿರೂಪಿಸಿ,ಸಾವಿತ್ರಿ ಎಂ. ವಂದಿಸಿದರು.

ಒಂದರಿಂದ ಏಳು ತರಗತಿಗಳನ್ನು ಹೊಂದಿರುವ ಈ ಶಾಲೆಯಲ್ಲಿ ಸಂಗೀತ, ಯೋಗ ತರಗತಿಗಳು ನಡೆಯುತ್ತಿದ್ದು ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣವನ್ನು ನೀಡಲಾಗುತ್ತಿದೆ. ಈ ಶೈಕ್ಷಣಿಕ ವರ್ಷದಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಭರತನಾಟ್ಯ ತರಗತಿಗಳು ನಡೆಯಲಿವೆ.

Related posts

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!