23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

ಶಿರ್ಲಾಲು: ಕರಂಬಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಭರತನಾಟ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮ ಎ.5ರಂದು ಜರಗಿತು.

ಹಿರಿಯ ಭರತನಾಟ್ಯ ಶಿಕ್ಷಕಿ ಉಮಾ ಮಾಧವಿ ಕೊಳಲಗಿರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಠ್ಯದೊಂದಿಗೆ ಭರತನಾಟ್ಯ, ಸಂಗೀತ ನಾಟಕ, ಯಕ್ಷಗಾನ ಮೊದಲಾದ ಕಲೆಗಳನ್ನು ಕಲಿಯುವುದರಿಂದ ಜ್ಞಾನದ ಅಭಿವೃದ್ಧಿ ಉಂಟಾಗುತ್ತದೆ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಊರಿನ ಹಿರಿಯರಾದ ನಾರಾಯಣ ಹೆಬ್ಬಾರ್ ಮತ್ತು ಕುಟುಂಬಸ್ಥರ ಶ್ರಮದ ಫಲವಾಗಿ ಈ ಶಾಲೆ ನಿರ್ಮಾಣವಾಗಿದ್ದು ಸ್ಥಳೀಯರ ಶಿಕ್ಷಣ ವ್ಯವಸ್ಥೆಗೆ ಪೂರಕ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪುಷ್ಪರಾಜ ಎಂ.ಕೆ., ಉಪಾಧ್ಯಕ್ಷೆ ವಿಜಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿವೇಕ ಕೇಳ್ಕರ್, ಶಿಕ್ಷಕಿಯರಾದ ಚೈತ್ರಾ ಕುಮಾರಿ, ಸೌಜನ್ಯಾ, ಲತಾ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ರಮೇಶ್ ಚೌಹಾನ್ ಸ್ವಾಗತಿಸಿದರು. ತಸ್ಮಿಯಾ ಪರ್ವಿನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಾಶಿವ ಕುಮಾರ್ ನಿರೂಪಿಸಿ,ಸಾವಿತ್ರಿ ಎಂ. ವಂದಿಸಿದರು.

ಒಂದರಿಂದ ಏಳು ತರಗತಿಗಳನ್ನು ಹೊಂದಿರುವ ಈ ಶಾಲೆಯಲ್ಲಿ ಸಂಗೀತ, ಯೋಗ ತರಗತಿಗಳು ನಡೆಯುತ್ತಿದ್ದು ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣವನ್ನು ನೀಡಲಾಗುತ್ತಿದೆ. ಈ ಶೈಕ್ಷಣಿಕ ವರ್ಷದಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಭರತನಾಟ್ಯ ತರಗತಿಗಳು ನಡೆಯಲಿವೆ.

Related posts

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!