23.5 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಗೇರುಕಟ್ಟೆ : ಎ.6.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯಲ್ಲಿರುವ ಅಶ್ವಥ ಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತ್ರತ್ವದಲ್ಲಿ ಎ.5 ರಂದು ಸಂಜೆ ನಡೆಯಿತು.


ರಾತ್ರಿ ಮಹಾ ಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ: ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ವತಿಯಿಂದ ದಿ| ಶ್ರೀ ಅನಂತರಾಮ ಬಂಗಾಡಿ ವಿರಚಿತ ಕಾಡಮಲ್ಲಿಗೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಮುಂದಿನ ವರ್ಷ ಬ್ರಹ್ಮಕಲಶೋತ್ಸವವು ಜರಗಲಿರುವುದ್ದರಿಂದ ದೇವಿಗೆ ಸ್ವರ್ಣ ಕಿರೀಟವನ್ನು ಸಮರ್ಪಿಸುವ ಉದ್ಧೇಶದಿಂದ ಕಾಣಿಕೆ ಡಬ್ಬಿಯನ್ನು ಅನಾವರಣಗೊಳಿಸಿ,ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ , ಸದಸ್ಯರಾದ. ರಾಘವ ಎಚ್ ನೀನಕುಮಾರ್. ಮೋಹಿನಿ. ಹೇಮಂತ್ ಕುಮಾರ್. ಶರತ್ ಕುಮಾರ್. ಕೆ ಹರೀಶ್.,ರಿಟಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಹಾಗೂಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಗೌಡಮತ್ತು ಮತ್ತು ಸದಸ್ಯರು . ಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಸದಸ್ಯರು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!