22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿನಿಧನವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದ ಹಿರಿಯ ನ್ಯಾಯವಾದಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ಜೆ.ಕೆ ಪೌಲ್ ರವರು ಎ.8ರಂದು ನಿಧನ ಹೊಂದಿದ್ದು ಇವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಎ.9ರಂದು ವಕೀಲರ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಶ್ರದ್ಧಾಂಜಲಿ ಸಭೆಯಲ್ಲಿ ಅವರ ಸಹಪಾಠಿಯಾಗಿದ್ದ ಸುಬ್ರಹ್ಮಣ್ಯ ಕುಮಾರ್ ಅಗರ್ತ ಜೆ.ಕೆ ಪೌಲ್ ರವರ ಕಾಲೇಜಿನ ದಿನಗಳು ಹಾಗೂ ವಕೀಲ ವೃತ್ತಿಯಲ್ಲಿ ಅವರು ತನ್ನನ್ನು ತಾನು ತೊಡಗಿಸಿದ್ದನ್ನು ಸ್ಮರಿಸಿದರು. ವಕೀಲರಾದ ಬಿ.ಕೆ ಧನಂಜಯ್ ರಾವ್, ಜೆ.ಕೆ ಪೌಲ್ ರವರ ವ್ಯಕ್ತಿತ್ವ ಹಾಗೂ ವೃತ್ತಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ರೀತಿಯನ್ನು ವಿವರಿಸಿದರು.

ವಕೀಲರಾದ ಕೇಶವ ಪಿ ಮಾತನಾಡಿ ಕಾಲೇಜು ದಿನಗಳ ಒಡನಾಟ ಹಾಗೂ ಅವರ ನೇರ ನಿಷ್ಠುರ ನಡೆಯ ಬಗ್ಗೆ ಮಾತನಾಡಿದರು.ಹೆಚ್ಚುವರಿ ನ್ಯಾಯಾಧೀಶರಾದ ವಿಜೇಂದ್ರ ಟಿ.ಹೆಚ್ ರವರು ನ್ಯಾಯಾಲಯದಲ್ಲಿ ಜೆ.ಕೆ ಪೌಲ್ ರವರ ಭಾಗವಹಿಸುವಿಕೆಯನ್ನು ನೆನಪಿಸಿಕೊಂಡರು.ವಕೀಲರಾದ ನವೀನ್ ಬಿ.ಕೆ ಸ್ಮರಿಸುತ್ತಾ ಅವರು ಕಿರಿಯ ವಕೀಲರುಗಳಿಗೆ ನೀಡುತ್ತಿದ್ದ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ಕೇಸ್ ನ ಬಗ್ಗೆ ನೀಡುತ್ತಿದ್ದ ಮಾಹಿತಿಗಳನ್ನು ನೆನಪಿಸಿಕೊಂಡರು.

ಸಭೆಯಲ್ಲಿ ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಬಿ.ಕೆ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜೇಂದ್ರ ಟಿ ಹೆಚ್, ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಹಿರಿಯ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಕಿರಿಯ ವಕೀಲರು ಭಾಗವಹಿಸಿ ಸಂತಾಪ ಸೂಚಿಸಿದರು.

Related posts

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ವಿದ್ಯಾರ್ಥಿಗಳಿಗೆ ವ್ವ್ಯಕ್ತಿತ್ವ ವಿಕಸನಾ ಮಾಹಿತಿ‌ ಶಿಬಿರ

Suddi Udaya
error: Content is protected !!