23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು1099 ವಿದ್ಯಾರ್ಥಿಗಳಲ್ಲಿ 1067ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 97.27 ಫಲಿತಾಂಶ ಬಂದಿದೆ.


ವಿಜ್ಞಾನ ವಿಭಾಗದಲ್ಲಿ 624 ವಿದ್ಯಾರ್ಥಿಗಳಲ್ಲಿ 606 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 162ವಿದ್ಯಾರ್ಥಿಗಳು ಅತ್ಯುತ್ತಮ, 411 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 32 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 1 ವಿದ್ಯಾರ್ಥಿ ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ತುಷಾರ ಬಿ.ಎಸ್ ೫೯೫, ನೀತಿ ಕೆ. ಪಿ. ೫೯೧, ಅಭಿಷೇಕ್ ವಿ.ಎಂ ೫೮೭, ಸಾನ್ವಿತ್ ಗೌಡ ಜಿ.ಎಲ್ ೫೮೬, ತ್ರಿಷಾ ೫೮೫, ಸಾನಿಕಾ ಬಾಬು ನಾಯ್ಕ್ ೫೮೩, ಚಿಂತನಾ ಡಿ ಜೈನ್ ೫೮೧, ಹಾರ್ದಿಕ್ ಎಸ್., ಸಿಯಲ್ ೫೭೯, ಪ್ರಮಾತ್ ಹೆಗ್ಡೆ ೫೭೮, ದೀಕ್ಷಿತ್ ಎಸ್.೫೭೭, ಅಕ್ಷರ ಎ.ಎನ್ ೫೭೪, ಸಂಧ್ಯಾ ಜಿ.ಯು ೫೭೩, ನಿರೀಕ್ಷಾ ೫೭೨, ನಿಶ್ಮಿತಾ ೫೭೦, ಮುತ್ತಮ್ಮ ಬಿ.ಎಸ್ ೫೭೦ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ವಾಣಿಜ್ಯ ವಿಭಾಗದಲ್ಲಿ ೩೬೫ ವಿದ್ಯಾರ್ಥಿಗಳಲ್ಲಿ ೩೫೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೦೭ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೨೧೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೩೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೪ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಆರ್ಯ ದಿನೇಶ್ ೫೯೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ಕಲಾ ವಿಭಾಗದಲ್ಲಿ ೧೧೦ ವಿದ್ಯಾರ್ಥಿಗಳಲ್ಲಿ ೧೦೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೯ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೫೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೨೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೭ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಶ್ರೇಯ ಎಚ್.ಎ.೫೮೯, ಕಾರ್ತಿಕ್ ಡಿ.ಸಿ ೫೭೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya
error: Content is protected !!