23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಎ. 9 ರಂದು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಿಬ್ಬಂದಿಗಳ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭಗೊಂಡಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ೦ತೋಷ್ ಪಾಟೀಲ್ ಸರಕಾರದ ಸುತ್ತೋಲೆಯನ್ನು ಓದಿ ಹೇಳಿದರು. ಕಾರ್ಯದರ್ಶಿ ಕುಂಙ ಕೆ ಸಾರ್ವಜನಿಕರ ಅರ್ಜಿಗಳನ್ನು ಸಭೆಗೆ ಓದಿ ಹೇಳಿದರು.
ಉದ್ಯೋಗ ಖಾತರಿಯ ಕೆಲಸಗಳ ಬಗ್ಗೆ ಚರ್ಚಿಸಲಾಯಿತು. ನರೇಗಾ ಅಭಿಯಂತರರಾದ ಶರಣ್ ರೈ ಸಭೆಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಅವಾಝ್ ವಸತಿ ಯೋಜನೆಗೆ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳ ಕುರಿತು ಪರಿಶೀಲಿಸಲಾಯಿತು. ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೆಲವು ಹದಗೆಟ್ಟ ಪಂಚಾಯತ್ ರಸ್ತೆಗಳನ್ನು ಮಳೆಗಾಲಕ್ಕೆ ಮೊದಲು ಪಂಚಾಯತ್ ವತಿಯಿಂದ ಸರಿಪಡಿಸುವಂತೆ ಸದಸ್ಯರು ಆಗ್ರಹಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ. ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ, ಲತೀಫ್ ಪರಿಮ, ಹರೀಶ್ ಕುಮಾರ್, ಶ್ರೀಮತಿ ಕುಸುಮ ಎನ್ ಬಂಗೇರ, ಶ್ರೀಮತಿ ಮರೀಟಾ ಪಿಂಟೋ, ವಿಜಯ ಗೌಡ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ ಮತ್ತು ಸಿಬ್ಬಂದಿಗಳಾದ ಶ್ರೀಮತಿ ಸುಚಿತ್ರಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೀಳಾ, ರವಿ ಎಚ್, ಶ್ರೀಮತಿ ನಂದಿನಿ ಪಿ ರೈ ಸುರೇಶ್ ಗೌಡ, ಕು.ಮಾನಸ ಹಾಜರಿದ್ದರು.

Related posts

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya
error: Content is protected !!