25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

ಕುತ್ಲೂರು : ಇಲ್ಲಿನ ಕುತ್ಲೂರು ಎಂಬಲ್ಲಿ ಗುರುವಾಯನಕೆರೆ – ನಾರಾವಿ ರಾಜ್ಯ ಹೆದ್ದಾರಿಯಲ್ಲಿ ನಾರಾವಿ ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಗಾಯಗೊಂಡು ಮೂಡುಬಿದಿರೆ ಆಸ್ಪತ್ರೆಗೆ ದಾಖಲಾದ ಘಟನೆ ಎ. 10ರಂದು ನಡೆದಿದೆ.

ಗೂಡ್ಸ್ ವಾಹನದ ಚಾಲಕರಾದ ಶಶಿಧರ ದೇವಾಡಿಗ ಎಂಬವರು ದುಡುಕುತನದಿಂದ ಬೇರೆ ವಾಹನಗಳನ್ನು ಓವರ ಟೇಕ್‌ ಮಾಡಿ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಗುರುವಾಯನಕೆರೆ ಕಡೆಯಿಂದ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ, ರಾಜೇಂದ್ರ ಆಳ್ವಾ ರವರಿಗೆ ಗಾಯ ಉಂಟಾಗಿದ್ದಲ್ಲದೇ ಎರಡು ವಾಹನಗಳು ಜಖಂ ಗೊಂಡಿದೆ. ಗಾಯಾಳು ರಾಜೇಂದ್ರ ಆಳ್ವಾರವರು ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya
error: Content is protected !!