30.2 C
ಪುತ್ತೂರು, ಬೆಳ್ತಂಗಡಿ
June 7, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ.

ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಉಸ್ಮಾನ್ ಎಂಬವರ ಮನೆಯೊಳಗೆ ಹೊಕ್ಕ ಕಳ್ಳರು ಸುಮಾರು 58 ಸಾವಿರ ರೂಪಾಯಿ ಹಾಗೂ 2 ಪವನ್ ಚಿನ್ನವನ್ನು ಕಪಾಟು ಹೊಡೆದು ದೋಚಿ ಪರಾರಿಯಾಗಿದ್ದಾರೆ. ಉಸ್ಮಾನ್ ಹಾಗೂ ಮನೆಯವರು ಬೆಳ್ಳಗ್ಗೆ 10:30 ಗಂಟೆ ವೇಳೆಗೆ ಮದುವೆ ಕಾರ್ಯಕ್ರಮ ಹೋಗಿದ್ದು ಸಂಜೆ 3: 30 ಗಂಟೆ ವೇಳೆ ಬರುವಾಗ ಈ ಘಟನೆ ನಡೆದಿದೆ.

ಬಡ ವರ್ಗದ ಕುಟುಂಬ ಉಸ್ಮಾನ್ ಅವರದ್ದಾಗಿದ್ದು ಸಾಲಕ್ಕೆ ಪಡೆದುಕೊಂಡಿರುವ ಮೊತ್ತವನ್ನು ಹಿಂತಿರುಗಿಸಲು ಕಪಾಟಿನಲ್ಲಿ ಇಟ್ಟಿದ್ದರು. ಆದರೆ ಖದೀಮರು ಅದನ್ನೇ ಎಗರಿಸಿ ಮನೆಯ ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಐಪಿಎಸ್ ಅಧಿಕಾರಿ ಮನೀಷಾ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಗೂಡ್ಸ್ ಟೆಂಪೋ ಡಿಕ್ಕಿ ದ್ವಿಚಕ್ರ ಸವಾರ ಸಾವು

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!