September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ.

ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಉಸ್ಮಾನ್ ಎಂಬವರ ಮನೆಯೊಳಗೆ ಹೊಕ್ಕ ಕಳ್ಳರು ಸುಮಾರು 58 ಸಾವಿರ ರೂಪಾಯಿ ಹಾಗೂ 2 ಪವನ್ ಚಿನ್ನವನ್ನು ಕಪಾಟು ಹೊಡೆದು ದೋಚಿ ಪರಾರಿಯಾಗಿದ್ದಾರೆ. ಉಸ್ಮಾನ್ ಹಾಗೂ ಮನೆಯವರು ಬೆಳ್ಳಗ್ಗೆ 10:30 ಗಂಟೆ ವೇಳೆಗೆ ಮದುವೆ ಕಾರ್ಯಕ್ರಮ ಹೋಗಿದ್ದು ಸಂಜೆ 3: 30 ಗಂಟೆ ವೇಳೆ ಬರುವಾಗ ಈ ಘಟನೆ ನಡೆದಿದೆ.

ಬಡ ವರ್ಗದ ಕುಟುಂಬ ಉಸ್ಮಾನ್ ಅವರದ್ದಾಗಿದ್ದು ಸಾಲಕ್ಕೆ ಪಡೆದುಕೊಂಡಿರುವ ಮೊತ್ತವನ್ನು ಹಿಂತಿರುಗಿಸಲು ಕಪಾಟಿನಲ್ಲಿ ಇಟ್ಟಿದ್ದರು. ಆದರೆ ಖದೀಮರು ಅದನ್ನೇ ಎಗರಿಸಿ ಮನೆಯ ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಐಪಿಎಸ್ ಅಧಿಕಾರಿ ಮನೀಷಾ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Suddi Udaya
error: Content is protected !!