23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ.

ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಉಸ್ಮಾನ್ ಎಂಬವರ ಮನೆಯೊಳಗೆ ಹೊಕ್ಕ ಕಳ್ಳರು ಸುಮಾರು 58 ಸಾವಿರ ರೂಪಾಯಿ ಹಾಗೂ 2 ಪವನ್ ಚಿನ್ನವನ್ನು ಕಪಾಟು ಹೊಡೆದು ದೋಚಿ ಪರಾರಿಯಾಗಿದ್ದಾರೆ. ಉಸ್ಮಾನ್ ಹಾಗೂ ಮನೆಯವರು ಬೆಳ್ಳಗ್ಗೆ 10:30 ಗಂಟೆ ವೇಳೆಗೆ ಮದುವೆ ಕಾರ್ಯಕ್ರಮ ಹೋಗಿದ್ದು ಸಂಜೆ 3: 30 ಗಂಟೆ ವೇಳೆ ಬರುವಾಗ ಈ ಘಟನೆ ನಡೆದಿದೆ.

ಬಡ ವರ್ಗದ ಕುಟುಂಬ ಉಸ್ಮಾನ್ ಅವರದ್ದಾಗಿದ್ದು ಸಾಲಕ್ಕೆ ಪಡೆದುಕೊಂಡಿರುವ ಮೊತ್ತವನ್ನು ಹಿಂತಿರುಗಿಸಲು ಕಪಾಟಿನಲ್ಲಿ ಇಟ್ಟಿದ್ದರು. ಆದರೆ ಖದೀಮರು ಅದನ್ನೇ ಎಗರಿಸಿ ಮನೆಯ ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಐಪಿಎಸ್ ಅಧಿಕಾರಿ ಮನೀಷಾ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!