September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆಯ ಅಂಗವಾಗಿ ಎ.10 ರಂದು ತೋರಣಮುಹೂರ್ತ , ವಿಮಾನಶುದ್ಧಿ, ಭಗವಾನ್ ಮಹಾವೀರ ಸ್ವಾಮಿಗೆ ನವಕಲಾಶಾಭಿಷೇಕ, ಭಗವಾನ್ ಶಾಂತಿನಾಥ ಸ್ವಾಮಿಗೆ 108 ಕಲಶಗಳಿಂದ ಮಹಾಭಿಷೇಕ, ಪದ್ಮಾವತಿ ಅಮ್ಮನವರಿಗೆ ಅಲಂಕಾರ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವಿಶೇಷ ಪೂಜೆ ನಡೆಯಿತು.


ಬಸದಿಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ನೇತೃತ್ವದಲ್ಲಿ ಪ್ರಧಾನ ಅರ್ಚಕ ಕೆ. ಜಯರಾಜ ಇಂದ್ರರು ಮತ್ತು ಸಹಪುರೋಹಿತರಯ ಧಾರ್ಮಿಕ ವಿಧಿ-ವಿಧಾನಗನ್ನು ನೆರವೇರಿಸಿದರು.
ಬಳಿಕ ನಡೆದ ಶಾಂತಿಚಕ್ರ ಆರಾಧನೆಯಲ್ಲಿ 26 ಮಂದಿ ಶ್ರಾವಕರು, ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.
ಭಗವಾನ್ ಮಹಾವೀರ ತೀರ್ಥಂಕರರ ಜೀವನ-ಸಾಧನೆ ಬಗ್ಯೆ ಉಪನ್ಯಾಸ ನೀಡಿದ ಅಳದಂಗಡಿ ಮಿತ್ರಸೇನ ಜೈನ್, ಮಹಾವೀರ ತೀರ್ಥಂಕರರು  ಬೋಧಿಸಿದ ಅಹಿಂಸೆ, ಅನೇಕಾಂತವಾದ, ಬದುಕು ಮತ್ತು ಬದುಕಲು ಬಿಡು ಮೊದಲಾದ ಉಪದೇಶಗಳು ಸಾರ್ವಜನಿಕ ಮೌಲ್ಯ ಹೊಂದಿವೆ. ಸಕಲ ಪ್ರಾಣಿಪಕ್ಷಿಗಳಿಗೂ ನಮ್ಮಂತೆಯೇ ಬದುಕುವ ಹಕ್ಕಿದೆ. ಮಹಾವೀರರು ಬೋಧಿಸಿದ ತತ್ವಗಳಿಂದ ವಿಶ್ವಶಾಂತಿಯೊಂದಿಗೆ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.


ಕೆ. ಜಯವರ್ಮರಾಜ ಬಳ್ಳಾಲ್, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಬೆಂಗಳೂರಿನ ವಕೀಲ ಕೆ.ಬಿ. ಯುವರಾಜ ಬಳ್ಳಾಲ್, ವಿಜಯಾ ಬ್ಯಾಂಕ್‌ನ  ನಿವೃತ್ತ ಪ್ರಬಂಧಕ ಎಂ. ಜಿನರಾಜ ಶೆಟ್ಟಿ, ಸುಮತಿ ಕೆ.ಆರ್. ಬಳ್ಳಾಲ್ದ, ವಿನಯಾ ಜೆ. ಬಳ್ಳಾಲ್, ಡಾ. ಪ್ರಿಯಾ ಬಳ್ಳಾಲ್ ಮತ್ತು ಮಣಿಮಾಲ ಬಳ್ಳಾಲ್ ಹಾಗೂ ಬಳ್ಳಾಲ್ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya
error: Content is protected !!