23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿಗೆ ಸಾಗುವ ರಸ್ತೆಯ ಮಡಂತ್ಯಾರು ಶಿಶು ಮಂದಿರ ಹತ್ತಿರ ಮಾರಿಗುಡಿ ಶ್ರೀರಾಮನಗರ ಕ್ರಾಸ್ ಬಳಿಯಲ್ಲಿ ಬಂಗೇರ ಕಟ್ಟೆ ಹಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಾಗಿಕೊಂಡಿದ್ದು ಅದರಲ್ಲೂ ಕೆಲವು ಕಡೆ ಒಣಗಿದ ಬಾರಿ ಗಾತ್ರದ ಮರಗಳು ಇನ್ನೇನು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿದೆ.

ಮಡಂತ್ಯಾರು ಶಿಶು ಮಂದಿರದ ಬಳಿಯಲ್ಲಿ ಸ್ವಲ್ಪ ಮುಂದಕ್ಕೆ ಎ.8 ರಂದು ಸಂಜೆ ಸುರಿದ ಗಾಳಿ ಮಳೆಗೆ ಒಣಗಿದ ಬಾರಿ ಗಾತ್ರದ ಮರದ ಕೊಂಬೆ ಮಡಂತ್ಯಾರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುವ ಅಟೋ ರಿಕ್ಷಾದ ಮೇಲೆ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಶ್ರೀರಾಮ ನಗರ ಕ್ರಾಸ್ ಸಮೀಪ ವಿದ್ಯುತ್ ತಂತಿಗಳ ಮೇಲೆ ಒಣಗಿದ ಮರ ತಂತಿಯ ಬೀಳುವ ಸ್ಥಿತಿಯಲ್ಲಿದೆ ಕೆಲವು ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಬಾರಿ ಪ್ರಮಾಣದ ಗಾಳಿ ಮಳೆಗೆ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸಿ ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya
error: Content is protected !!