September 6, 2026
Uncategorized

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿಗೆ ಸಾಗುವ ರಸ್ತೆಯ ಮಡಂತ್ಯಾರು ಶಿಶು ಮಂದಿರ ಹತ್ತಿರ ಮಾರಿಗುಡಿ ಶ್ರೀರಾಮನಗರ ಕ್ರಾಸ್ ಬಳಿಯಲ್ಲಿ ಬಂಗೇರ ಕಟ್ಟೆ ಹಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಾಗಿಕೊಂಡಿದ್ದು ಅದರಲ್ಲೂ ಕೆಲವು ಕಡೆ ಒಣಗಿದ ಬಾರಿ ಗಾತ್ರದ ಮರಗಳು ಇನ್ನೇನು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿದೆ.

ಮಡಂತ್ಯಾರು ಶಿಶು ಮಂದಿರದ ಬಳಿಯಲ್ಲಿ ಸ್ವಲ್ಪ ಮುಂದಕ್ಕೆ ಎ.8 ರಂದು ಸಂಜೆ ಸುರಿದ ಗಾಳಿ ಮಳೆಗೆ ಒಣಗಿದ ಬಾರಿ ಗಾತ್ರದ ಮರದ ಕೊಂಬೆ ಮಡಂತ್ಯಾರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುವ ಅಟೋ ರಿಕ್ಷಾದ ಮೇಲೆ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಶ್ರೀರಾಮ ನಗರ ಕ್ರಾಸ್ ಸಮೀಪ ವಿದ್ಯುತ್ ತಂತಿಗಳ ಮೇಲೆ ಒಣಗಿದ ಮರ ತಂತಿಯ ಬೀಳುವ ಸ್ಥಿತಿಯಲ್ಲಿದೆ ಕೆಲವು ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಬಾರಿ ಪ್ರಮಾಣದ ಗಾಳಿ ಮಳೆಗೆ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸಿ ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya
error: Content is protected !!