25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ.


ಒಂದು ತಿಂಗಳ ಹಿಂದೆ ಗ್ರಾಮದ ಆಯ್ದ ನಾಲ್ಕು ಕಡೆ ಸೂಕ್ಷ್ಮ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ತಿಂಗಳ ಅಂತರದಲ್ಲೇ ಇದೀಗ ಒಂದು ಕ್ಯಾಮರಾವನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯ ತಂದೆಸೆಯುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಳಿ ಹರಿಕೆ ಡಬ್ಬಿಗಳ ಕಳ್ಳತನ ಸೇರಿದಂತೆ ಇತರೇ ಅಪರಾಧ ಚಟುವಟಿಕೆಗಳು ಹೆಚ್ಚಿದ್ದರಿಂದ ಪಂಚಾಯತ್ ವತಿಯಿಂದ ಈ ಹೊಸ ಪ್ರಯತ್ನ ನಡೆಸಲಾಗಿತ್ತು. ಇದರ ಆಧಾರದಲ್ಲಿ ಕೆಲವು ಅಪರಾಧ ಪ್ರಕರಣ ಪತ್ತೆಯೂ ಆಗಿತ್ತು. ತ್ಯಾಜ್ಯ ತಂದು ಹಾಕಿದವರನ್ನು ಗುರುತಿಸಿ ಅವರಿಂದಲೇ ಮತ್ತೆ ಹೆಕ್ಕಿಸಿದ ಪ್ರಸಂಗವೂ ನಡೆದಿತ್ತು.

ಎಲ್‌ಐಸಿ ಯವರು ಹಾಕಿದ್ದ ಲ್ಯಾಂಪ್ ಕಳ್ಳತನವಾಗಿತ್ತು; ಹಲವು ವರ್ಷಗಳ ಹಿಂದೆ ಎಲ್‌ಐಸಿ ವತಿಯಿಂದ ಇದೇ ಈ‌ ಸೀಟು ಭಾಗದಲ್ಲಿ ಬ್ಯಾಟರಿ ಸ್ಟ್ಯಾಂಡ್ ಸಹಿತ ಬೀದಿ ದೀಪ ಅಳವಡಿಸಲಾಗಿದ್ದುದನ್ನು ಬ್ಯಾಟರಿ ಸಹಿತ ಯಾರೋ‌ ಕಳ್ಳರು ಕದ್ದೊಯ್ದಿದ್ದರು. ಇದೀಗ ಭದ್ರತೆಯ ದೃಷ್ಟಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮರಾವನ್ನೂ‌ ಕೂಡ ಕಳ್ಳರು ಕದ್ದೊಯ್ದಿದ್ದಾರೆ.

Related posts

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya
error: Content is protected !!