April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

ಬೆಳ್ತಂಗಡಿ: ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಏ.೧೦ರಂದು ಬೆಳಿಗ್ಗೆ ೮.೪೫ರಿಂದ ದರ್ಶನ ಬಲಿ ಉತ್ಸವ ಊರ ಹಾಗೂ ಪರವೂರ ಭಕ್ತರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ರಾತ್ರಿ 8 ರಿಂದ ದೇವರ ಬಲಿ ಉತ್ಸವ, ಮಷ್ಪರಥೋತ್ಸವ, ನಿತ್ಯಬಲಿ ಉತ್ಸವ, ರಥಕಟ್ಟೆ ಮೊಜೆ, ಮಹಾಪೂಜೆ, ಭೂತಬಲಿ ಹಾಗೂ ಶಯನೋತ್ಸವ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರ್ಯ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 11ರಿಂದ ಸಂಗಮ ಕಲಾವಿದರು ಉಜಿರೆ ಇವರಿಂದ ಗಿರೀಶ್ ಹೊಳ್ಳ ನಿರ್ದೇಶನದ ‘ಕಾಸ್ಟ ಕಸರತ್’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಎ.6ರಂದು ಗಣವತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ರಾತ್ರಿ ರಂಗ ಪೂಜೆ, ಉತ್ಸವ ಜರಗಿತು ಎ.7ರಂದು ಬೆಳಿಗ್ಗೆ ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ ಅನ್ನಸಂತರ್ವಣೆ ಎ.8ರಂದು 12.30ರಿಂದ ಮಹಾಪೂಜೆ, ನಿತ್ಯಬಲಿ, ಅನ್ನಸಂತ ರ್ವಣೆ, ಸಂಜೆ ಸುರ್ಯಗುತ್ತು ಮನೆಯಿಂದ ಧರ್ಮದೈವಗಳ ಭಂಡಾರವನ್ನು ಮೆರವಣಿಗೆಯಲ್ಲಿ ತರಲಾಯಿತು.

ರಾತ್ರಿ ೮ರಿಂದ ಉತ್ಸವ ಹೊರಟು ವಸಂತಕಟ್ಟೆ ಪೂಜೆ, ಮಹಾಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ೯.೩೦ರಿಂದ ರಾಜ್ಯಪ್ರಶಸ್ತಿ ವಿಜೇತ ತೆಲಿಕೆದ ಬೊಳ್ಳಿ ಡಾ. ದೇವದಾನ್ ಕಾಪಿಕಾಡ್ ರಚಿಸಿ, ನಿದೇಶಿಸಿದ ‘ಏರ್ಲಾ ಗ್ಯಾರಂಟಿ ಅತ್’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು. ಎ.೯ರಂದು ಬೆಳಗ್ಗೆ ಸೊಡರಬಲಿ ಉತ್ಸವ, ಮಧ್ಯಾಹ್ನ ಮಹಾಪೂಜೆ, ಅನ್ನಸಂತ ರ್ವಣೆ ರಾತ್ರಿ ಗಂಟೆ ೮ರಿಂದ ಉತ್ಸವ ಹೊರಟು ಕೆರೆಕಟ್ಟೆ ಪೂಜೆ, ಮಹಾಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ೯.೩೦ಕ್ಕೆ ಕಲರ್ಸ್‌ ಕನ್ನಡ ಖ್ಯಾತಿಯ ಜಿಲ್ಲಾ ರಾಜೋತ್ಸವ ಪ್ರಶಸ್ತಿ ಮರಸ್ಕೃತ ಮತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ‘ಸಂಗೀತ ಗಾನ ಸಂಭ್ರಮ’ ನಡೆಯಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಸತೀಶ್ಚಂದ್ರ ಸುರ್ಯಗುತ್ತು, , ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡ್ವೆಟ್ನಾಯ, ಧನಂಜಯ ಅಜ್ಜಿ ನಡಗುತ್ತು,
ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ್ ಅಜ್ರಿ, ಮುನಿರಾಜ ಅತ್ರಿ, ಪ್ರಸಾದ್ ಹಾಗೂ ಬೃಹತ್ ಸಂಖ್ಯೆಯಲ್ಲಿ ಭಕ್ತಾದಿಗಳು ಕಾರ್ಯಕ್ರಮಗಳಲ್ಲಿ ಉಪಸ್ಥಿತರಿದ್ದರು.

Related posts

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya
error: Content is protected !!