24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

ಉಜಿರೆ: 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು1099 ವಿದ್ಯಾರ್ಥಿಗಳಲ್ಲಿ 1067ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 97.27 ಫಲಿತಾಂಶ ಬಂದಿದೆ.


ವಿಜ್ಞಾನ ವಿಭಾಗದಲ್ಲಿ 624 ವಿದ್ಯಾರ್ಥಿಗಳಲ್ಲಿ 606 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 162ವಿದ್ಯಾರ್ಥಿಗಳು ಅತ್ಯುತ್ತಮ, 411 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 32 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 1 ವಿದ್ಯಾರ್ಥಿ ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ತುಷಾರ ಬಿ.ಎಸ್ ೫೯೫, ನೀತಿ ಕೆ. ಪಿ. ೫೯೧, ಅಭಿಷೇಕ್ ವಿ.ಎಂ ೫೮೭, ಸಾನ್ವಿತ್ ಗೌಡ ಜಿ.ಎಲ್ ೫೮೬, ತ್ರಿಷಾ ೫೮೫, ಸಾನಿಕಾ ಬಾಬು ನಾಯ್ಕ್ ೫೮೩, ಚಿಂತನಾ ಡಿ ಜೈನ್ ೫೮೧, ಹಾರ್ದಿಕ್ ಎಸ್., ಸಿಯಲ್ ೫೭೯, ಪ್ರಮಾತ್ ಹೆಗ್ಡೆ ೫೭೮, ದೀಕ್ಷಿತ್ ಎಸ್.೫೭೭, ಅಕ್ಷರ ಎ.ಎನ್ ೫೭೪, ಸಂಧ್ಯಾ ಜಿ.ಯು ೫೭೩, ನಿರೀಕ್ಷಾ ೫೭೨, ನಿಶ್ಮಿತಾ ೫೭೦, ಮುತ್ತಮ್ಮ ಬಿ.ಎಸ್ ೫೭೦ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ವಾಣಿಜ್ಯ ವಿಭಾಗದಲ್ಲಿ ೩೬೫ ವಿದ್ಯಾರ್ಥಿಗಳಲ್ಲಿ ೩೫೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೦೭ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೨೧೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೩೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೪ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಆರ್ಯ ದಿನೇಶ್ ೫೯೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ಕಲಾ ವಿಭಾಗದಲ್ಲಿ ೧೧೦ ವಿದ್ಯಾರ್ಥಿಗಳಲ್ಲಿ ೧೦೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೯ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, ೫೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೨೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, ೭ ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಶ್ರೇಯ ಎಚ್.ಎ.೫೮೯, ಕಾರ್ತಿಕ್ ಡಿ.ಸಿ ೫೭೩ ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya
error: Content is protected !!