27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

ಬೆಳ್ತಂಗಡಿ : ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.

ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಇಂಡಿಯಾ ವನ್ ಎಂಬ ಹೆಸರಿನ ಖಾಸಗಿ ಸಂಸ್ಥೆಯ ಏ ಟಿ ಎಂ ಕೇಂದ್ರ ಕ್ಕೆ ನುಗ್ಗಿದ ಕಳ್ಳರು ಅಲ್ಲಿನ ಸಿ ಸಿ ಕ್ಯಾಮರಾ ವನ್ನು ಕಿತ್ತೆಗೆಯಲು ಯತ್ನಿಸಿ , ಏ ಟಿ ಎಂ ಮಿಷಿನ್ ನನ್ನು ತೆರೆಯಲು ಯತ್ನಿಸಿ ಏ ಟಿ ಎಂ ಮಿಷಿನ್ ಗೆ ಹಾನಿಯನ್ನುಂಟು ಮಾಡಲಾಗಿತ್ತು.


ಈ ಬಗ್ಗೆ ಇಂಡಿಯಾ ವನ್ ಕಾಲ್ ಸೆಂಟರ್ ನಿಂದ ಕಲ್ಲೇರಿಯ ಎ ಟಿ ಎಂ ಕೇಂದ್ರದಲ್ಲಿ ಯಾವುದೋ ಅನುಚಿತ ಕೃಉತ್ಯ ನಡೆಯುತ್ತಿದೆ ಎಂಬ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕಳವು ಯತ್ನ ಪ್ರಕರಣ ನಡೆದಿರುವುದು ಕಂಡು ಬಂದಿತ್ತು. ಈ ಬಗ್ಗೆ ಪ್ರಶಾಂತ್ ಡಿ ಕೋಸ್ಟಾ ರವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


ಸುರಕ್ಷತೆಯ ಹೊರತಾಗಿಯೂ ಪದೇ ಪದೇ ಕಳವು ಯತ್ನ: ಖಾಸಗಿ ಎ ಟಿ ಎಂ ಕೇಂದ್ರವು ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು, ಪ್ರತಿ ಕೇಂದ್ರದ ಚಲನವಲನಗಳ ಬಗ್ಗೆ ನಿಗಾವಿರಿಸುವ ವ್ಯವಸ್ಥೆಯನ್ನು ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಎ ಟಿ ಎಂ ಕೇಂದ್ರದ ಒಳ ಹೊಕ್ಕು ಮಿಷಿನ್ ತೆರೆಯಲು ಯತ್ನಿಸಿದರೂ, ಹಣತುಂಬಿದ ವಿಭಾಗದ ಬಾಗಿಲು ತೆರೆಯಬೇಕಾದರೆ ಒಟಿಪಿ ಆಧಾರಿತ ವ್ಯವಸ್ಥೆ ಅಳವಡಿಸಿದ ಪರಿಣಾಮ ಕಳ್ಳರಿಗೆ ಹಣ ಕದಿಯಲು ಅಸಾಧ್ಯವಾಗುತ್ತಿದೆ. ಕೆಲ ಸಮಯದ್ ಅಹಿಂದೆ ತೆಕ್ಕಾರು ಎಂಬಲ್ಲಿ ಇದೇ ರೀತಿ ಎಟಿಎಂ ಕೇಂದ್ರದಲ್ಲಿ ಕಳವು ಯತ್ನ ನಡೆದಿದ್ದು, ಇದೀಗ ಕಲ್ಲೇರಿಯಲ್ಲಿ ಮತ್ತೇ ಅದೇ ತೆರನಾದ ಕಳವು ಯತ್ನ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪರಿಸರದ ಸಿಸಿ ಕ್ಯಾಮರಾದಲ್ಲಿನ ದೃಶ್ಯಾವಳಿಗಳ ಮೇಲೆ ನಿಗಾವಿರಿಸಿ ಕಳವಿಗೆ ಯತ್ನಿಸಿದ ವ್ಯಕ್ತಿಗಳನ್ನು ಗುರುತಿಸಲು ಶ್ರಮಿಸುತ್ತಿದ್ದಾರೆ.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!