22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

ಬೆಳ್ತಂಗಡಿ : ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿಯ ಎಟಿಎಂ ಕೇಂದ್ರವೊಂದಕ್ಕೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.

ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಇಂಡಿಯಾ ವನ್ ಎಂಬ ಹೆಸರಿನ ಖಾಸಗಿ ಸಂಸ್ಥೆಯ ಏ ಟಿ ಎಂ ಕೇಂದ್ರ ಕ್ಕೆ ನುಗ್ಗಿದ ಕಳ್ಳರು ಅಲ್ಲಿನ ಸಿ ಸಿ ಕ್ಯಾಮರಾ ವನ್ನು ಕಿತ್ತೆಗೆಯಲು ಯತ್ನಿಸಿ , ಏ ಟಿ ಎಂ ಮಿಷಿನ್ ನನ್ನು ತೆರೆಯಲು ಯತ್ನಿಸಿ ಏ ಟಿ ಎಂ ಮಿಷಿನ್ ಗೆ ಹಾನಿಯನ್ನುಂಟು ಮಾಡಲಾಗಿತ್ತು.


ಈ ಬಗ್ಗೆ ಇಂಡಿಯಾ ವನ್ ಕಾಲ್ ಸೆಂಟರ್ ನಿಂದ ಕಲ್ಲೇರಿಯ ಎ ಟಿ ಎಂ ಕೇಂದ್ರದಲ್ಲಿ ಯಾವುದೋ ಅನುಚಿತ ಕೃಉತ್ಯ ನಡೆಯುತ್ತಿದೆ ಎಂಬ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕಳವು ಯತ್ನ ಪ್ರಕರಣ ನಡೆದಿರುವುದು ಕಂಡು ಬಂದಿತ್ತು. ಈ ಬಗ್ಗೆ ಪ್ರಶಾಂತ್ ಡಿ ಕೋಸ್ಟಾ ರವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.


ಸುರಕ್ಷತೆಯ ಹೊರತಾಗಿಯೂ ಪದೇ ಪದೇ ಕಳವು ಯತ್ನ: ಖಾಸಗಿ ಎ ಟಿ ಎಂ ಕೇಂದ್ರವು ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು, ಪ್ರತಿ ಕೇಂದ್ರದ ಚಲನವಲನಗಳ ಬಗ್ಗೆ ನಿಗಾವಿರಿಸುವ ವ್ಯವಸ್ಥೆಯನ್ನು ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಎ ಟಿ ಎಂ ಕೇಂದ್ರದ ಒಳ ಹೊಕ್ಕು ಮಿಷಿನ್ ತೆರೆಯಲು ಯತ್ನಿಸಿದರೂ, ಹಣತುಂಬಿದ ವಿಭಾಗದ ಬಾಗಿಲು ತೆರೆಯಬೇಕಾದರೆ ಒಟಿಪಿ ಆಧಾರಿತ ವ್ಯವಸ್ಥೆ ಅಳವಡಿಸಿದ ಪರಿಣಾಮ ಕಳ್ಳರಿಗೆ ಹಣ ಕದಿಯಲು ಅಸಾಧ್ಯವಾಗುತ್ತಿದೆ. ಕೆಲ ಸಮಯದ್ ಅಹಿಂದೆ ತೆಕ್ಕಾರು ಎಂಬಲ್ಲಿ ಇದೇ ರೀತಿ ಎಟಿಎಂ ಕೇಂದ್ರದಲ್ಲಿ ಕಳವು ಯತ್ನ ನಡೆದಿದ್ದು, ಇದೀಗ ಕಲ್ಲೇರಿಯಲ್ಲಿ ಮತ್ತೇ ಅದೇ ತೆರನಾದ ಕಳವು ಯತ್ನ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪರಿಸರದ ಸಿಸಿ ಕ್ಯಾಮರಾದಲ್ಲಿನ ದೃಶ್ಯಾವಳಿಗಳ ಮೇಲೆ ನಿಗಾವಿರಿಸಿ ಕಳವಿಗೆ ಯತ್ನಿಸಿದ ವ್ಯಕ್ತಿಗಳನ್ನು ಗುರುತಿಸಲು ಶ್ರಮಿಸುತ್ತಿದ್ದಾರೆ.

Related posts

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya
error: Content is protected !!