27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಎ. 9 ರಂದು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಿಬ್ಬಂದಿಗಳ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭಗೊಂಡಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ೦ತೋಷ್ ಪಾಟೀಲ್ ಸರಕಾರದ ಸುತ್ತೋಲೆಯನ್ನು ಓದಿ ಹೇಳಿದರು. ಕಾರ್ಯದರ್ಶಿ ಕುಂಙ ಕೆ ಸಾರ್ವಜನಿಕರ ಅರ್ಜಿಗಳನ್ನು ಸಭೆಗೆ ಓದಿ ಹೇಳಿದರು.
ಉದ್ಯೋಗ ಖಾತರಿಯ ಕೆಲಸಗಳ ಬಗ್ಗೆ ಚರ್ಚಿಸಲಾಯಿತು. ನರೇಗಾ ಅಭಿಯಂತರರಾದ ಶರಣ್ ರೈ ಸಭೆಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಅವಾಝ್ ವಸತಿ ಯೋಜನೆಗೆ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳ ಕುರಿತು ಪರಿಶೀಲಿಸಲಾಯಿತು. ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೆಲವು ಹದಗೆಟ್ಟ ಪಂಚಾಯತ್ ರಸ್ತೆಗಳನ್ನು ಮಳೆಗಾಲಕ್ಕೆ ಮೊದಲು ಪಂಚಾಯತ್ ವತಿಯಿಂದ ಸರಿಪಡಿಸುವಂತೆ ಸದಸ್ಯರು ಆಗ್ರಹಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ. ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ, ಲತೀಫ್ ಪರಿಮ, ಹರೀಶ್ ಕುಮಾರ್, ಶ್ರೀಮತಿ ಕುಸುಮ ಎನ್ ಬಂಗೇರ, ಶ್ರೀಮತಿ ಮರೀಟಾ ಪಿಂಟೋ, ವಿಜಯ ಗೌಡ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ ಮತ್ತು ಸಿಬ್ಬಂದಿಗಳಾದ ಶ್ರೀಮತಿ ಸುಚಿತ್ರಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೀಳಾ, ರವಿ ಎಚ್, ಶ್ರೀಮತಿ ನಂದಿನಿ ಪಿ ರೈ ಸುರೇಶ್ ಗೌಡ, ಕು.ಮಾನಸ ಹಾಜರಿದ್ದರು.

Related posts

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!