July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಎ. 9 ರಂದು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಿಬ್ಬಂದಿಗಳ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭಗೊಂಡಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ೦ತೋಷ್ ಪಾಟೀಲ್ ಸರಕಾರದ ಸುತ್ತೋಲೆಯನ್ನು ಓದಿ ಹೇಳಿದರು. ಕಾರ್ಯದರ್ಶಿ ಕುಂಙ ಕೆ ಸಾರ್ವಜನಿಕರ ಅರ್ಜಿಗಳನ್ನು ಸಭೆಗೆ ಓದಿ ಹೇಳಿದರು.
ಉದ್ಯೋಗ ಖಾತರಿಯ ಕೆಲಸಗಳ ಬಗ್ಗೆ ಚರ್ಚಿಸಲಾಯಿತು. ನರೇಗಾ ಅಭಿಯಂತರರಾದ ಶರಣ್ ರೈ ಸಭೆಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಅವಾಝ್ ವಸತಿ ಯೋಜನೆಗೆ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳ ಕುರಿತು ಪರಿಶೀಲಿಸಲಾಯಿತು. ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೆಲವು ಹದಗೆಟ್ಟ ಪಂಚಾಯತ್ ರಸ್ತೆಗಳನ್ನು ಮಳೆಗಾಲಕ್ಕೆ ಮೊದಲು ಪಂಚಾಯತ್ ವತಿಯಿಂದ ಸರಿಪಡಿಸುವಂತೆ ಸದಸ್ಯರು ಆಗ್ರಹಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ. ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ, ಲತೀಫ್ ಪರಿಮ, ಹರೀಶ್ ಕುಮಾರ್, ಶ್ರೀಮತಿ ಕುಸುಮ ಎನ್ ಬಂಗೇರ, ಶ್ರೀಮತಿ ಮರೀಟಾ ಪಿಂಟೋ, ವಿಜಯ ಗೌಡ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ ಮತ್ತು ಸಿಬ್ಬಂದಿಗಳಾದ ಶ್ರೀಮತಿ ಸುಚಿತ್ರಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೀಳಾ, ರವಿ ಎಚ್, ಶ್ರೀಮತಿ ನಂದಿನಿ ಪಿ ರೈ ಸುರೇಶ್ ಗೌಡ, ಕು.ಮಾನಸ ಹಾಜರಿದ್ದರು.

Related posts

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!