23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಎ. 9 ರಂದು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಿಬ್ಬಂದಿಗಳ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭಗೊಂಡಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ೦ತೋಷ್ ಪಾಟೀಲ್ ಸರಕಾರದ ಸುತ್ತೋಲೆಯನ್ನು ಓದಿ ಹೇಳಿದರು. ಕಾರ್ಯದರ್ಶಿ ಕುಂಙ ಕೆ ಸಾರ್ವಜನಿಕರ ಅರ್ಜಿಗಳನ್ನು ಸಭೆಗೆ ಓದಿ ಹೇಳಿದರು.
ಉದ್ಯೋಗ ಖಾತರಿಯ ಕೆಲಸಗಳ ಬಗ್ಗೆ ಚರ್ಚಿಸಲಾಯಿತು. ನರೇಗಾ ಅಭಿಯಂತರರಾದ ಶರಣ್ ರೈ ಸಭೆಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಅವಾಝ್ ವಸತಿ ಯೋಜನೆಗೆ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳ ಕುರಿತು ಪರಿಶೀಲಿಸಲಾಯಿತು. ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೆಲವು ಹದಗೆಟ್ಟ ಪಂಚಾಯತ್ ರಸ್ತೆಗಳನ್ನು ಮಳೆಗಾಲಕ್ಕೆ ಮೊದಲು ಪಂಚಾಯತ್ ವತಿಯಿಂದ ಸರಿಪಡಿಸುವಂತೆ ಸದಸ್ಯರು ಆಗ್ರಹಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ. ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ, ಲತೀಫ್ ಪರಿಮ, ಹರೀಶ್ ಕುಮಾರ್, ಶ್ರೀಮತಿ ಕುಸುಮ ಎನ್ ಬಂಗೇರ, ಶ್ರೀಮತಿ ಮರೀಟಾ ಪಿಂಟೋ, ವಿಜಯ ಗೌಡ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ ಮತ್ತು ಸಿಬ್ಬಂದಿಗಳಾದ ಶ್ರೀಮತಿ ಸುಚಿತ್ರಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೀಳಾ, ರವಿ ಎಚ್, ಶ್ರೀಮತಿ ನಂದಿನಿ ಪಿ ರೈ ಸುರೇಶ್ ಗೌಡ, ಕು.ಮಾನಸ ಹಾಜರಿದ್ದರು.

Related posts

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya
error: Content is protected !!