22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

ಕುತ್ಲೂರು : ಇಲ್ಲಿನ ಕುತ್ಲೂರು ಎಂಬಲ್ಲಿ ಗುರುವಾಯನಕೆರೆ – ನಾರಾವಿ ರಾಜ್ಯ ಹೆದ್ದಾರಿಯಲ್ಲಿ ನಾರಾವಿ ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಗಾಯಗೊಂಡು ಮೂಡುಬಿದಿರೆ ಆಸ್ಪತ್ರೆಗೆ ದಾಖಲಾದ ಘಟನೆ ಎ. 10ರಂದು ನಡೆದಿದೆ.

ಗೂಡ್ಸ್ ವಾಹನದ ಚಾಲಕರಾದ ಶಶಿಧರ ದೇವಾಡಿಗ ಎಂಬವರು ದುಡುಕುತನದಿಂದ ಬೇರೆ ವಾಹನಗಳನ್ನು ಓವರ ಟೇಕ್‌ ಮಾಡಿ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಗುರುವಾಯನಕೆರೆ ಕಡೆಯಿಂದ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ, ರಾಜೇಂದ್ರ ಆಳ್ವಾ ರವರಿಗೆ ಗಾಯ ಉಂಟಾಗಿದ್ದಲ್ಲದೇ ಎರಡು ವಾಹನಗಳು ಜಖಂ ಗೊಂಡಿದೆ. ಗಾಯಾಳು ರಾಜೇಂದ್ರ ಆಳ್ವಾರವರು ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
error: Content is protected !!