30.4 C
ಪುತ್ತೂರು, ಬೆಳ್ತಂಗಡಿ
June 6, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ.

ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಉಸ್ಮಾನ್ ಎಂಬವರ ಮನೆಯೊಳಗೆ ಹೊಕ್ಕ ಕಳ್ಳರು ಸುಮಾರು 58 ಸಾವಿರ ರೂಪಾಯಿ ಹಾಗೂ 2 ಪವನ್ ಚಿನ್ನವನ್ನು ಕಪಾಟು ಹೊಡೆದು ದೋಚಿ ಪರಾರಿಯಾಗಿದ್ದಾರೆ. ಉಸ್ಮಾನ್ ಹಾಗೂ ಮನೆಯವರು ಬೆಳ್ಳಗ್ಗೆ 10:30 ಗಂಟೆ ವೇಳೆಗೆ ಮದುವೆ ಕಾರ್ಯಕ್ರಮ ಹೋಗಿದ್ದು ಸಂಜೆ 3: 30 ಗಂಟೆ ವೇಳೆ ಬರುವಾಗ ಈ ಘಟನೆ ನಡೆದಿದೆ.

ಬಡ ವರ್ಗದ ಕುಟುಂಬ ಉಸ್ಮಾನ್ ಅವರದ್ದಾಗಿದ್ದು ಸಾಲಕ್ಕೆ ಪಡೆದುಕೊಂಡಿರುವ ಮೊತ್ತವನ್ನು ಹಿಂತಿರುಗಿಸಲು ಕಪಾಟಿನಲ್ಲಿ ಇಟ್ಟಿದ್ದರು. ಆದರೆ ಖದೀಮರು ಅದನ್ನೇ ಎಗರಿಸಿ ಮನೆಯ ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಐಪಿಎಸ್ ಅಧಿಕಾರಿ ಮನೀಷಾ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya
error: Content is protected !!