22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆಯ ಅಂಗವಾಗಿ ಎ.10 ರಂದು ತೋರಣಮುಹೂರ್ತ , ವಿಮಾನಶುದ್ಧಿ, ಭಗವಾನ್ ಮಹಾವೀರ ಸ್ವಾಮಿಗೆ ನವಕಲಾಶಾಭಿಷೇಕ, ಭಗವಾನ್ ಶಾಂತಿನಾಥ ಸ್ವಾಮಿಗೆ 108 ಕಲಶಗಳಿಂದ ಮಹಾಭಿಷೇಕ, ಪದ್ಮಾವತಿ ಅಮ್ಮನವರಿಗೆ ಅಲಂಕಾರ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವಿಶೇಷ ಪೂಜೆ ನಡೆಯಿತು.


ಬಸದಿಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ನೇತೃತ್ವದಲ್ಲಿ ಪ್ರಧಾನ ಅರ್ಚಕ ಕೆ. ಜಯರಾಜ ಇಂದ್ರರು ಮತ್ತು ಸಹಪುರೋಹಿತರಯ ಧಾರ್ಮಿಕ ವಿಧಿ-ವಿಧಾನಗನ್ನು ನೆರವೇರಿಸಿದರು.
ಬಳಿಕ ನಡೆದ ಶಾಂತಿಚಕ್ರ ಆರಾಧನೆಯಲ್ಲಿ 26 ಮಂದಿ ಶ್ರಾವಕರು, ಶ್ರಾವಕಿಯರು ಭಾಗವಹಿಸಿ ಪುಣ್ಯಭಾಗಿಗಳಾದರು.
ಭಗವಾನ್ ಮಹಾವೀರ ತೀರ್ಥಂಕರರ ಜೀವನ-ಸಾಧನೆ ಬಗ್ಯೆ ಉಪನ್ಯಾಸ ನೀಡಿದ ಅಳದಂಗಡಿ ಮಿತ್ರಸೇನ ಜೈನ್, ಮಹಾವೀರ ತೀರ್ಥಂಕರರು  ಬೋಧಿಸಿದ ಅಹಿಂಸೆ, ಅನೇಕಾಂತವಾದ, ಬದುಕು ಮತ್ತು ಬದುಕಲು ಬಿಡು ಮೊದಲಾದ ಉಪದೇಶಗಳು ಸಾರ್ವಜನಿಕ ಮೌಲ್ಯ ಹೊಂದಿವೆ. ಸಕಲ ಪ್ರಾಣಿಪಕ್ಷಿಗಳಿಗೂ ನಮ್ಮಂತೆಯೇ ಬದುಕುವ ಹಕ್ಕಿದೆ. ಮಹಾವೀರರು ಬೋಧಿಸಿದ ತತ್ವಗಳಿಂದ ವಿಶ್ವಶಾಂತಿಯೊಂದಿಗೆ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.


ಕೆ. ಜಯವರ್ಮರಾಜ ಬಳ್ಳಾಲ್, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಬೆಂಗಳೂರಿನ ವಕೀಲ ಕೆ.ಬಿ. ಯುವರಾಜ ಬಳ್ಳಾಲ್, ವಿಜಯಾ ಬ್ಯಾಂಕ್‌ನ  ನಿವೃತ್ತ ಪ್ರಬಂಧಕ ಎಂ. ಜಿನರಾಜ ಶೆಟ್ಟಿ, ಸುಮತಿ ಕೆ.ಆರ್. ಬಳ್ಳಾಲ್ದ, ವಿನಯಾ ಜೆ. ಬಳ್ಳಾಲ್, ಡಾ. ಪ್ರಿಯಾ ಬಳ್ಳಾಲ್ ಮತ್ತು ಮಣಿಮಾಲ ಬಳ್ಳಾಲ್ ಹಾಗೂ ಬಳ್ಳಾಲ್ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್ ಮೊಹಂತಿ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!