32.6 C
ಪುತ್ತೂರು, ಬೆಳ್ತಂಗಡಿ
June 6, 2025
Uncategorized

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿಗೆ ಸಾಗುವ ರಸ್ತೆಯ ಮಡಂತ್ಯಾರು ಶಿಶು ಮಂದಿರ ಹತ್ತಿರ ಮಾರಿಗುಡಿ ಶ್ರೀರಾಮನಗರ ಕ್ರಾಸ್ ಬಳಿಯಲ್ಲಿ ಬಂಗೇರ ಕಟ್ಟೆ ಹಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಾಗಿಕೊಂಡಿದ್ದು ಅದರಲ್ಲೂ ಕೆಲವು ಕಡೆ ಒಣಗಿದ ಬಾರಿ ಗಾತ್ರದ ಮರಗಳು ಇನ್ನೇನು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿದೆ.

ಮಡಂತ್ಯಾರು ಶಿಶು ಮಂದಿರದ ಬಳಿಯಲ್ಲಿ ಸ್ವಲ್ಪ ಮುಂದಕ್ಕೆ ಎ.8 ರಂದು ಸಂಜೆ ಸುರಿದ ಗಾಳಿ ಮಳೆಗೆ ಒಣಗಿದ ಬಾರಿ ಗಾತ್ರದ ಮರದ ಕೊಂಬೆ ಮಡಂತ್ಯಾರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುವ ಅಟೋ ರಿಕ್ಷಾದ ಮೇಲೆ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಶ್ರೀರಾಮ ನಗರ ಕ್ರಾಸ್ ಸಮೀಪ ವಿದ್ಯುತ್ ತಂತಿಗಳ ಮೇಲೆ ಒಣಗಿದ ಮರ ತಂತಿಯ ಬೀಳುವ ಸ್ಥಿತಿಯಲ್ಲಿದೆ ಕೆಲವು ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಬಾರಿ ಪ್ರಮಾಣದ ಗಾಳಿ ಮಳೆಗೆ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸಿ ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!