September 6, 2026
Uncategorized

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿಗೆ ಸಾಗುವ ರಸ್ತೆಯ ಮಡಂತ್ಯಾರು ಶಿಶು ಮಂದಿರ ಹತ್ತಿರ ಮಾರಿಗುಡಿ ಶ್ರೀರಾಮನಗರ ಕ್ರಾಸ್ ಬಳಿಯಲ್ಲಿ ಬಂಗೇರ ಕಟ್ಟೆ ಹಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಾಗಿಕೊಂಡಿದ್ದು ಅದರಲ್ಲೂ ಕೆಲವು ಕಡೆ ಒಣಗಿದ ಬಾರಿ ಗಾತ್ರದ ಮರಗಳು ಇನ್ನೇನು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿದೆ.

ಮಡಂತ್ಯಾರು ಶಿಶು ಮಂದಿರದ ಬಳಿಯಲ್ಲಿ ಸ್ವಲ್ಪ ಮುಂದಕ್ಕೆ ಎ.8 ರಂದು ಸಂಜೆ ಸುರಿದ ಗಾಳಿ ಮಳೆಗೆ ಒಣಗಿದ ಬಾರಿ ಗಾತ್ರದ ಮರದ ಕೊಂಬೆ ಮಡಂತ್ಯಾರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುವ ಅಟೋ ರಿಕ್ಷಾದ ಮೇಲೆ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಶ್ರೀರಾಮ ನಗರ ಕ್ರಾಸ್ ಸಮೀಪ ವಿದ್ಯುತ್ ತಂತಿಗಳ ಮೇಲೆ ಒಣಗಿದ ಮರ ತಂತಿಯ ಬೀಳುವ ಸ್ಥಿತಿಯಲ್ಲಿದೆ ಕೆಲವು ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಬಾರಿ ಪ್ರಮಾಣದ ಗಾಳಿ ಮಳೆಗೆ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸಿ ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!