25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿಗೆ ಸಾಗುವ ರಸ್ತೆಯ ಮಡಂತ್ಯಾರು ಶಿಶು ಮಂದಿರ ಹತ್ತಿರ ಮಾರಿಗುಡಿ ಶ್ರೀರಾಮನಗರ ಕ್ರಾಸ್ ಬಳಿಯಲ್ಲಿ ಬಂಗೇರ ಕಟ್ಟೆ ಹಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಾಗಿಕೊಂಡಿದ್ದು ಅದರಲ್ಲೂ ಕೆಲವು ಕಡೆ ಒಣಗಿದ ಬಾರಿ ಗಾತ್ರದ ಮರಗಳು ಇನ್ನೇನು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿದೆ.

ಮಡಂತ್ಯಾರು ಶಿಶು ಮಂದಿರದ ಬಳಿಯಲ್ಲಿ ಸ್ವಲ್ಪ ಮುಂದಕ್ಕೆ ಎ.8 ರಂದು ಸಂಜೆ ಸುರಿದ ಗಾಳಿ ಮಳೆಗೆ ಒಣಗಿದ ಬಾರಿ ಗಾತ್ರದ ಮರದ ಕೊಂಬೆ ಮಡಂತ್ಯಾರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುವ ಅಟೋ ರಿಕ್ಷಾದ ಮೇಲೆ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಶ್ರೀರಾಮ ನಗರ ಕ್ರಾಸ್ ಸಮೀಪ ವಿದ್ಯುತ್ ತಂತಿಗಳ ಮೇಲೆ ಒಣಗಿದ ಮರ ತಂತಿಯ ಬೀಳುವ ಸ್ಥಿತಿಯಲ್ಲಿದೆ ಕೆಲವು ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಬಾರಿ ಪ್ರಮಾಣದ ಗಾಳಿ ಮಳೆಗೆ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸಿ ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya
error: Content is protected !!