22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿಗೆ ಸಾಗುವ ರಸ್ತೆಯ ಮಡಂತ್ಯಾರು ಶಿಶು ಮಂದಿರ ಹತ್ತಿರ ಮಾರಿಗುಡಿ ಶ್ರೀರಾಮನಗರ ಕ್ರಾಸ್ ಬಳಿಯಲ್ಲಿ ಬಂಗೇರ ಕಟ್ಟೆ ಹಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಾಗಿಕೊಂಡಿದ್ದು ಅದರಲ್ಲೂ ಕೆಲವು ಕಡೆ ಒಣಗಿದ ಬಾರಿ ಗಾತ್ರದ ಮರಗಳು ಇನ್ನೇನು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿದೆ.

ಮಡಂತ್ಯಾರು ಶಿಶು ಮಂದಿರದ ಬಳಿಯಲ್ಲಿ ಸ್ವಲ್ಪ ಮುಂದಕ್ಕೆ ಎ.8 ರಂದು ಸಂಜೆ ಸುರಿದ ಗಾಳಿ ಮಳೆಗೆ ಒಣಗಿದ ಬಾರಿ ಗಾತ್ರದ ಮರದ ಕೊಂಬೆ ಮಡಂತ್ಯಾರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುವ ಅಟೋ ರಿಕ್ಷಾದ ಮೇಲೆ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಶ್ರೀರಾಮ ನಗರ ಕ್ರಾಸ್ ಸಮೀಪ ವಿದ್ಯುತ್ ತಂತಿಗಳ ಮೇಲೆ ಒಣಗಿದ ಮರ ತಂತಿಯ ಬೀಳುವ ಸ್ಥಿತಿಯಲ್ಲಿದೆ ಕೆಲವು ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಬಾರಿ ಪ್ರಮಾಣದ ಗಾಳಿ ಮಳೆಗೆ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸಿ ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!