24 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ.


ಒಂದು ತಿಂಗಳ ಹಿಂದೆ ಗ್ರಾಮದ ಆಯ್ದ ನಾಲ್ಕು ಕಡೆ ಸೂಕ್ಷ್ಮ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ತಿಂಗಳ ಅಂತರದಲ್ಲೇ ಇದೀಗ ಒಂದು ಕ್ಯಾಮರಾವನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯ ತಂದೆಸೆಯುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಳಿ ಹರಿಕೆ ಡಬ್ಬಿಗಳ ಕಳ್ಳತನ ಸೇರಿದಂತೆ ಇತರೇ ಅಪರಾಧ ಚಟುವಟಿಕೆಗಳು ಹೆಚ್ಚಿದ್ದರಿಂದ ಪಂಚಾಯತ್ ವತಿಯಿಂದ ಈ ಹೊಸ ಪ್ರಯತ್ನ ನಡೆಸಲಾಗಿತ್ತು. ಇದರ ಆಧಾರದಲ್ಲಿ ಕೆಲವು ಅಪರಾಧ ಪ್ರಕರಣ ಪತ್ತೆಯೂ ಆಗಿತ್ತು. ತ್ಯಾಜ್ಯ ತಂದು ಹಾಕಿದವರನ್ನು ಗುರುತಿಸಿ ಅವರಿಂದಲೇ ಮತ್ತೆ ಹೆಕ್ಕಿಸಿದ ಪ್ರಸಂಗವೂ ನಡೆದಿತ್ತು.

ಎಲ್‌ಐಸಿ ಯವರು ಹಾಕಿದ್ದ ಲ್ಯಾಂಪ್ ಕಳ್ಳತನವಾಗಿತ್ತು; ಹಲವು ವರ್ಷಗಳ ಹಿಂದೆ ಎಲ್‌ಐಸಿ ವತಿಯಿಂದ ಇದೇ ಈ‌ ಸೀಟು ಭಾಗದಲ್ಲಿ ಬ್ಯಾಟರಿ ಸ್ಟ್ಯಾಂಡ್ ಸಹಿತ ಬೀದಿ ದೀಪ ಅಳವಡಿಸಲಾಗಿದ್ದುದನ್ನು ಬ್ಯಾಟರಿ ಸಹಿತ ಯಾರೋ‌ ಕಳ್ಳರು ಕದ್ದೊಯ್ದಿದ್ದರು. ಇದೀಗ ಭದ್ರತೆಯ ದೃಷ್ಟಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮರಾವನ್ನೂ‌ ಕೂಡ ಕಳ್ಳರು ಕದ್ದೊಯ್ದಿದ್ದಾರೆ.

Related posts

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya
error: Content is protected !!