April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ.


ಒಂದು ತಿಂಗಳ ಹಿಂದೆ ಗ್ರಾಮದ ಆಯ್ದ ನಾಲ್ಕು ಕಡೆ ಸೂಕ್ಷ್ಮ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ತಿಂಗಳ ಅಂತರದಲ್ಲೇ ಇದೀಗ ಒಂದು ಕ್ಯಾಮರಾವನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯ ತಂದೆಸೆಯುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಳಿ ಹರಿಕೆ ಡಬ್ಬಿಗಳ ಕಳ್ಳತನ ಸೇರಿದಂತೆ ಇತರೇ ಅಪರಾಧ ಚಟುವಟಿಕೆಗಳು ಹೆಚ್ಚಿದ್ದರಿಂದ ಪಂಚಾಯತ್ ವತಿಯಿಂದ ಈ ಹೊಸ ಪ್ರಯತ್ನ ನಡೆಸಲಾಗಿತ್ತು. ಇದರ ಆಧಾರದಲ್ಲಿ ಕೆಲವು ಅಪರಾಧ ಪ್ರಕರಣ ಪತ್ತೆಯೂ ಆಗಿತ್ತು. ತ್ಯಾಜ್ಯ ತಂದು ಹಾಕಿದವರನ್ನು ಗುರುತಿಸಿ ಅವರಿಂದಲೇ ಮತ್ತೆ ಹೆಕ್ಕಿಸಿದ ಪ್ರಸಂಗವೂ ನಡೆದಿತ್ತು.

ಎಲ್‌ಐಸಿ ಯವರು ಹಾಕಿದ್ದ ಲ್ಯಾಂಪ್ ಕಳ್ಳತನವಾಗಿತ್ತು; ಹಲವು ವರ್ಷಗಳ ಹಿಂದೆ ಎಲ್‌ಐಸಿ ವತಿಯಿಂದ ಇದೇ ಈ‌ ಸೀಟು ಭಾಗದಲ್ಲಿ ಬ್ಯಾಟರಿ ಸ್ಟ್ಯಾಂಡ್ ಸಹಿತ ಬೀದಿ ದೀಪ ಅಳವಡಿಸಲಾಗಿದ್ದುದನ್ನು ಬ್ಯಾಟರಿ ಸಹಿತ ಯಾರೋ‌ ಕಳ್ಳರು ಕದ್ದೊಯ್ದಿದ್ದರು. ಇದೀಗ ಭದ್ರತೆಯ ದೃಷ್ಟಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮರಾವನ್ನೂ‌ ಕೂಡ ಕಳ್ಳರು ಕದ್ದೊಯ್ದಿದ್ದಾರೆ.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ನಡ ಬೇಲಿ ವಿವಾದ: ಜೀವ ಬೆದರಿಕೆ ವಿರುದ್ಧ ಠಾಣೆಗೆ ದೂರು

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ