22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ.


ಒಂದು ತಿಂಗಳ ಹಿಂದೆ ಗ್ರಾಮದ ಆಯ್ದ ನಾಲ್ಕು ಕಡೆ ಸೂಕ್ಷ್ಮ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ತಿಂಗಳ ಅಂತರದಲ್ಲೇ ಇದೀಗ ಒಂದು ಕ್ಯಾಮರಾವನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯ ತಂದೆಸೆಯುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಳಿ ಹರಿಕೆ ಡಬ್ಬಿಗಳ ಕಳ್ಳತನ ಸೇರಿದಂತೆ ಇತರೇ ಅಪರಾಧ ಚಟುವಟಿಕೆಗಳು ಹೆಚ್ಚಿದ್ದರಿಂದ ಪಂಚಾಯತ್ ವತಿಯಿಂದ ಈ ಹೊಸ ಪ್ರಯತ್ನ ನಡೆಸಲಾಗಿತ್ತು. ಇದರ ಆಧಾರದಲ್ಲಿ ಕೆಲವು ಅಪರಾಧ ಪ್ರಕರಣ ಪತ್ತೆಯೂ ಆಗಿತ್ತು. ತ್ಯಾಜ್ಯ ತಂದು ಹಾಕಿದವರನ್ನು ಗುರುತಿಸಿ ಅವರಿಂದಲೇ ಮತ್ತೆ ಹೆಕ್ಕಿಸಿದ ಪ್ರಸಂಗವೂ ನಡೆದಿತ್ತು.

ಎಲ್‌ಐಸಿ ಯವರು ಹಾಕಿದ್ದ ಲ್ಯಾಂಪ್ ಕಳ್ಳತನವಾಗಿತ್ತು; ಹಲವು ವರ್ಷಗಳ ಹಿಂದೆ ಎಲ್‌ಐಸಿ ವತಿಯಿಂದ ಇದೇ ಈ‌ ಸೀಟು ಭಾಗದಲ್ಲಿ ಬ್ಯಾಟರಿ ಸ್ಟ್ಯಾಂಡ್ ಸಹಿತ ಬೀದಿ ದೀಪ ಅಳವಡಿಸಲಾಗಿದ್ದುದನ್ನು ಬ್ಯಾಟರಿ ಸಹಿತ ಯಾರೋ‌ ಕಳ್ಳರು ಕದ್ದೊಯ್ದಿದ್ದರು. ಇದೀಗ ಭದ್ರತೆಯ ದೃಷ್ಟಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮರಾವನ್ನೂ‌ ಕೂಡ ಕಳ್ಳರು ಕದ್ದೊಯ್ದಿದ್ದಾರೆ.

Related posts

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!