26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ.


ಒಂದು ತಿಂಗಳ ಹಿಂದೆ ಗ್ರಾಮದ ಆಯ್ದ ನಾಲ್ಕು ಕಡೆ ಸೂಕ್ಷ್ಮ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ತಿಂಗಳ ಅಂತರದಲ್ಲೇ ಇದೀಗ ಒಂದು ಕ್ಯಾಮರಾವನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯ ತಂದೆಸೆಯುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಳಿ ಹರಿಕೆ ಡಬ್ಬಿಗಳ ಕಳ್ಳತನ ಸೇರಿದಂತೆ ಇತರೇ ಅಪರಾಧ ಚಟುವಟಿಕೆಗಳು ಹೆಚ್ಚಿದ್ದರಿಂದ ಪಂಚಾಯತ್ ವತಿಯಿಂದ ಈ ಹೊಸ ಪ್ರಯತ್ನ ನಡೆಸಲಾಗಿತ್ತು. ಇದರ ಆಧಾರದಲ್ಲಿ ಕೆಲವು ಅಪರಾಧ ಪ್ರಕರಣ ಪತ್ತೆಯೂ ಆಗಿತ್ತು. ತ್ಯಾಜ್ಯ ತಂದು ಹಾಕಿದವರನ್ನು ಗುರುತಿಸಿ ಅವರಿಂದಲೇ ಮತ್ತೆ ಹೆಕ್ಕಿಸಿದ ಪ್ರಸಂಗವೂ ನಡೆದಿತ್ತು.

ಎಲ್‌ಐಸಿ ಯವರು ಹಾಕಿದ್ದ ಲ್ಯಾಂಪ್ ಕಳ್ಳತನವಾಗಿತ್ತು; ಹಲವು ವರ್ಷಗಳ ಹಿಂದೆ ಎಲ್‌ಐಸಿ ವತಿಯಿಂದ ಇದೇ ಈ‌ ಸೀಟು ಭಾಗದಲ್ಲಿ ಬ್ಯಾಟರಿ ಸ್ಟ್ಯಾಂಡ್ ಸಹಿತ ಬೀದಿ ದೀಪ ಅಳವಡಿಸಲಾಗಿದ್ದುದನ್ನು ಬ್ಯಾಟರಿ ಸಹಿತ ಯಾರೋ‌ ಕಳ್ಳರು ಕದ್ದೊಯ್ದಿದ್ದರು. ಇದೀಗ ಭದ್ರತೆಯ ದೃಷ್ಟಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮರಾವನ್ನೂ‌ ಕೂಡ ಕಳ್ಳರು ಕದ್ದೊಯ್ದಿದ್ದಾರೆ.

Related posts

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯಿಂದ ವೈದ್ಯಕೀಯ ನೆರವು

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!