September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯು ಎ. 9 ರಂದು ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿವಾಕರ ಎಮ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಿಬ್ಬಂದಿಗಳ ಪ್ರಾರ್ಥನೆಯೊಂದಿಗೆ ಸಭೆ ಪ್ರಾರಂಭಗೊಂಡಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ೦ತೋಷ್ ಪಾಟೀಲ್ ಸರಕಾರದ ಸುತ್ತೋಲೆಯನ್ನು ಓದಿ ಹೇಳಿದರು. ಕಾರ್ಯದರ್ಶಿ ಕುಂಙ ಕೆ ಸಾರ್ವಜನಿಕರ ಅರ್ಜಿಗಳನ್ನು ಸಭೆಗೆ ಓದಿ ಹೇಳಿದರು.
ಉದ್ಯೋಗ ಖಾತರಿಯ ಕೆಲಸಗಳ ಬಗ್ಗೆ ಚರ್ಚಿಸಲಾಯಿತು. ನರೇಗಾ ಅಭಿಯಂತರರಾದ ಶರಣ್ ರೈ ಸಭೆಗೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಅವಾಝ್ ವಸತಿ ಯೋಜನೆಗೆ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳ ಕುರಿತು ಪರಿಶೀಲಿಸಲಾಯಿತು. ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೆಲವು ಹದಗೆಟ್ಟ ಪಂಚಾಯತ್ ರಸ್ತೆಗಳನ್ನು ಮಳೆಗಾಲಕ್ಕೆ ಮೊದಲು ಪಂಚಾಯತ್ ವತಿಯಿಂದ ಸರಿಪಡಿಸುವಂತೆ ಸದಸ್ಯರು ಆಗ್ರಹಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಇಂದಿರಾ ಬಿ. ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಶ್ರೀಮತಿ ಮೋಹಿನಿ, ಶ್ರೀಮತಿ ಸುಭಾಷಿಣಿ, ಲತೀಫ್ ಪರಿಮ, ಹರೀಶ್ ಕುಮಾರ್, ಶ್ರೀಮತಿ ಕುಸುಮ ಎನ್ ಬಂಗೇರ, ಶ್ರೀಮತಿ ಮರೀಟಾ ಪಿಂಟೋ, ವಿಜಯ ಗೌಡ, ಯಶೋದರ ಶೆಟ್ಟಿ, ಶ್ರೀಮತಿ ಪುಷ್ಪಾ, ಶ್ರೀಮತಿ ಶ್ವೇತಾ ಮತ್ತು ಸಿಬ್ಬಂದಿಗಳಾದ ಶ್ರೀಮತಿ ಸುಚಿತ್ರಾ, ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೀಳಾ, ರವಿ ಎಚ್, ಶ್ರೀಮತಿ ನಂದಿನಿ ಪಿ ರೈ ಸುರೇಶ್ ಗೌಡ, ಕು.ಮಾನಸ ಹಾಜರಿದ್ದರು.

Related posts

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ಮಾದಕ ವಸ್ತು ಮಾರಾಟ ಯತ್ನ: ವಿದೇಶಕ್ಕೆ ತೆರಳಬೇಕಿದ್ದ ಯುವಕ ಜೈಲುಪಾಲು

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ಧರ್ಮಸ್ಥಳದಿಂದ ಆನ್‌ಲೈನ್ ಜಾಗೃತಿ ಕಾರ್ಯಕ್ರಮ; ಕುಂಭಶ್ರೀ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವೀಕ್ಷಣೆ

Suddi Udaya
error: Content is protected !!