37.5 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

ಕುತ್ಲೂರು : ಇಲ್ಲಿನ ಕುತ್ಲೂರು ಎಂಬಲ್ಲಿ ಗುರುವಾಯನಕೆರೆ – ನಾರಾವಿ ರಾಜ್ಯ ಹೆದ್ದಾರಿಯಲ್ಲಿ ನಾರಾವಿ ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಗಾಯಗೊಂಡು ಮೂಡುಬಿದಿರೆ ಆಸ್ಪತ್ರೆಗೆ ದಾಖಲಾದ ಘಟನೆ ಎ. 10ರಂದು ನಡೆದಿದೆ.

ಗೂಡ್ಸ್ ವಾಹನದ ಚಾಲಕರಾದ ಶಶಿಧರ ದೇವಾಡಿಗ ಎಂಬವರು ದುಡುಕುತನದಿಂದ ಬೇರೆ ವಾಹನಗಳನ್ನು ಓವರ ಟೇಕ್‌ ಮಾಡಿ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಗುರುವಾಯನಕೆರೆ ಕಡೆಯಿಂದ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ, ರಾಜೇಂದ್ರ ಆಳ್ವಾ ರವರಿಗೆ ಗಾಯ ಉಂಟಾಗಿದ್ದಲ್ಲದೇ ಎರಡು ವಾಹನಗಳು ಜಖಂ ಗೊಂಡಿದೆ. ಗಾಯಾಳು ರಾಜೇಂದ್ರ ಆಳ್ವಾರವರು ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

Suddi Udaya
error: Content is protected !!