24.4 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

ಕುತ್ಲೂರು : ಇಲ್ಲಿನ ಕುತ್ಲೂರು ಎಂಬಲ್ಲಿ ಗುರುವಾಯನಕೆರೆ – ನಾರಾವಿ ರಾಜ್ಯ ಹೆದ್ದಾರಿಯಲ್ಲಿ ನಾರಾವಿ ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಗಾಯಗೊಂಡು ಮೂಡುಬಿದಿರೆ ಆಸ್ಪತ್ರೆಗೆ ದಾಖಲಾದ ಘಟನೆ ಎ. 10ರಂದು ನಡೆದಿದೆ.

ಗೂಡ್ಸ್ ವಾಹನದ ಚಾಲಕರಾದ ಶಶಿಧರ ದೇವಾಡಿಗ ಎಂಬವರು ದುಡುಕುತನದಿಂದ ಬೇರೆ ವಾಹನಗಳನ್ನು ಓವರ ಟೇಕ್‌ ಮಾಡಿ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಗುರುವಾಯನಕೆರೆ ಕಡೆಯಿಂದ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ, ರಾಜೇಂದ್ರ ಆಳ್ವಾ ರವರಿಗೆ ಗಾಯ ಉಂಟಾಗಿದ್ದಲ್ಲದೇ ಎರಡು ವಾಹನಗಳು ಜಖಂ ಗೊಂಡಿದೆ. ಗಾಯಾಳು ರಾಜೇಂದ್ರ ಆಳ್ವಾರವರು ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya
error: Content is protected !!