37.5 C
ಪುತ್ತೂರು, ಬೆಳ್ತಂಗಡಿ
April 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ.

ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಉಸ್ಮಾನ್ ಎಂಬವರ ಮನೆಯೊಳಗೆ ಹೊಕ್ಕ ಕಳ್ಳರು ಸುಮಾರು 58 ಸಾವಿರ ರೂಪಾಯಿ ಹಾಗೂ 2 ಪವನ್ ಚಿನ್ನವನ್ನು ಕಪಾಟು ಹೊಡೆದು ದೋಚಿ ಪರಾರಿಯಾಗಿದ್ದಾರೆ. ಉಸ್ಮಾನ್ ಹಾಗೂ ಮನೆಯವರು ಬೆಳ್ಳಗ್ಗೆ 10:30 ಗಂಟೆ ವೇಳೆಗೆ ಮದುವೆ ಕಾರ್ಯಕ್ರಮ ಹೋಗಿದ್ದು ಸಂಜೆ 3: 30 ಗಂಟೆ ವೇಳೆ ಬರುವಾಗ ಈ ಘಟನೆ ನಡೆದಿದೆ.

ಬಡ ವರ್ಗದ ಕುಟುಂಬ ಉಸ್ಮಾನ್ ಅವರದ್ದಾಗಿದ್ದು ಸಾಲಕ್ಕೆ ಪಡೆದುಕೊಂಡಿರುವ ಮೊತ್ತವನ್ನು ಹಿಂತಿರುಗಿಸಲು ಕಪಾಟಿನಲ್ಲಿ ಇಟ್ಟಿದ್ದರು. ಆದರೆ ಖದೀಮರು ಅದನ್ನೇ ಎಗರಿಸಿ ಮನೆಯ ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಐಪಿಎಸ್ ಅಧಿಕಾರಿ ಮನೀಷಾ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!