37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ.

ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ಉಸ್ಮಾನ್ ಎಂಬವರ ಮನೆಯೊಳಗೆ ಹೊಕ್ಕ ಕಳ್ಳರು ಸುಮಾರು 58 ಸಾವಿರ ರೂಪಾಯಿ ಹಾಗೂ 2 ಪವನ್ ಚಿನ್ನವನ್ನು ಕಪಾಟು ಹೊಡೆದು ದೋಚಿ ಪರಾರಿಯಾಗಿದ್ದಾರೆ. ಉಸ್ಮಾನ್ ಹಾಗೂ ಮನೆಯವರು ಬೆಳ್ಳಗ್ಗೆ 10:30 ಗಂಟೆ ವೇಳೆಗೆ ಮದುವೆ ಕಾರ್ಯಕ್ರಮ ಹೋಗಿದ್ದು ಸಂಜೆ 3: 30 ಗಂಟೆ ವೇಳೆ ಬರುವಾಗ ಈ ಘಟನೆ ನಡೆದಿದೆ.

ಬಡ ವರ್ಗದ ಕುಟುಂಬ ಉಸ್ಮಾನ್ ಅವರದ್ದಾಗಿದ್ದು ಸಾಲಕ್ಕೆ ಪಡೆದುಕೊಂಡಿರುವ ಮೊತ್ತವನ್ನು ಹಿಂತಿರುಗಿಸಲು ಕಪಾಟಿನಲ್ಲಿ ಇಟ್ಟಿದ್ದರು. ಆದರೆ ಖದೀಮರು ಅದನ್ನೇ ಎಗರಿಸಿ ಮನೆಯ ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಐಪಿಎಸ್ ಅಧಿಕಾರಿ ಮನೀಷಾ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya
error: Content is protected !!