September 6, 2026
Uncategorized

ಮಡಂತ್ಯಾರು ರಸ್ತೆಯ ಬದಿಯಲ್ಲಿ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆೆ ಸಾರ್ವಜನಿಕರ ಒತ್ತಾಯ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿಗೆ ಸಾಗುವ ರಸ್ತೆಯ ಮಡಂತ್ಯಾರು ಶಿಶು ಮಂದಿರ ಹತ್ತಿರ ಮಾರಿಗುಡಿ ಶ್ರೀರಾಮನಗರ ಕ್ರಾಸ್ ಬಳಿಯಲ್ಲಿ ಬಂಗೇರ ಕಟ್ಟೆ ಹಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಾಗಿಕೊಂಡಿದ್ದು ಅದರಲ್ಲೂ ಕೆಲವು ಕಡೆ ಒಣಗಿದ ಬಾರಿ ಗಾತ್ರದ ಮರಗಳು ಇನ್ನೇನು ಗಾಳಿ ಮಳೆಗೆ ಬೀಳುವ ಸ್ಥಿತಿಯಲ್ಲಿದೆ.

ಮಡಂತ್ಯಾರು ಶಿಶು ಮಂದಿರದ ಬಳಿಯಲ್ಲಿ ಸ್ವಲ್ಪ ಮುಂದಕ್ಕೆ ಎ.8 ರಂದು ಸಂಜೆ ಸುರಿದ ಗಾಳಿ ಮಳೆಗೆ ಒಣಗಿದ ಬಾರಿ ಗಾತ್ರದ ಮರದ ಕೊಂಬೆ ಮಡಂತ್ಯಾರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುವ ಅಟೋ ರಿಕ್ಷಾದ ಮೇಲೆ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಶ್ರೀರಾಮ ನಗರ ಕ್ರಾಸ್ ಸಮೀಪ ವಿದ್ಯುತ್ ತಂತಿಗಳ ಮೇಲೆ ಒಣಗಿದ ಮರ ತಂತಿಯ ಬೀಳುವ ಸ್ಥಿತಿಯಲ್ಲಿದೆ ಕೆಲವು ತಿಂಗಳುಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ಬಾರಿ ಪ್ರಮಾಣದ ಗಾಳಿ ಮಳೆಗೆ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ಇತ್ತ ಕಡೆ ಗಮನ ಹರಿಸಿ ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya
error: Content is protected !!