32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ.


ಒಂದು ತಿಂಗಳ ಹಿಂದೆ ಗ್ರಾಮದ ಆಯ್ದ ನಾಲ್ಕು ಕಡೆ ಸೂಕ್ಷ್ಮ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ತಿಂಗಳ ಅಂತರದಲ್ಲೇ ಇದೀಗ ಒಂದು ಕ್ಯಾಮರಾವನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯ ತಂದೆಸೆಯುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಳಿ ಹರಿಕೆ ಡಬ್ಬಿಗಳ ಕಳ್ಳತನ ಸೇರಿದಂತೆ ಇತರೇ ಅಪರಾಧ ಚಟುವಟಿಕೆಗಳು ಹೆಚ್ಚಿದ್ದರಿಂದ ಪಂಚಾಯತ್ ವತಿಯಿಂದ ಈ ಹೊಸ ಪ್ರಯತ್ನ ನಡೆಸಲಾಗಿತ್ತು. ಇದರ ಆಧಾರದಲ್ಲಿ ಕೆಲವು ಅಪರಾಧ ಪ್ರಕರಣ ಪತ್ತೆಯೂ ಆಗಿತ್ತು. ತ್ಯಾಜ್ಯ ತಂದು ಹಾಕಿದವರನ್ನು ಗುರುತಿಸಿ ಅವರಿಂದಲೇ ಮತ್ತೆ ಹೆಕ್ಕಿಸಿದ ಪ್ರಸಂಗವೂ ನಡೆದಿತ್ತು.

ಎಲ್‌ಐಸಿ ಯವರು ಹಾಕಿದ್ದ ಲ್ಯಾಂಪ್ ಕಳ್ಳತನವಾಗಿತ್ತು; ಹಲವು ವರ್ಷಗಳ ಹಿಂದೆ ಎಲ್‌ಐಸಿ ವತಿಯಿಂದ ಇದೇ ಈ‌ ಸೀಟು ಭಾಗದಲ್ಲಿ ಬ್ಯಾಟರಿ ಸ್ಟ್ಯಾಂಡ್ ಸಹಿತ ಬೀದಿ ದೀಪ ಅಳವಡಿಸಲಾಗಿದ್ದುದನ್ನು ಬ್ಯಾಟರಿ ಸಹಿತ ಯಾರೋ‌ ಕಳ್ಳರು ಕದ್ದೊಯ್ದಿದ್ದರು. ಇದೀಗ ಭದ್ರತೆಯ ದೃಷ್ಟಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮರಾವನ್ನೂ‌ ಕೂಡ ಕಳ್ಳರು ಕದ್ದೊಯ್ದಿದ್ದಾರೆ.

Related posts

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya
error: Content is protected !!