23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ.


ಒಂದು ತಿಂಗಳ ಹಿಂದೆ ಗ್ರಾಮದ ಆಯ್ದ ನಾಲ್ಕು ಕಡೆ ಸೂಕ್ಷ್ಮ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ತಿಂಗಳ ಅಂತರದಲ್ಲೇ ಇದೀಗ ಒಂದು ಕ್ಯಾಮರಾವನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯ ತಂದೆಸೆಯುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಳಿ ಹರಿಕೆ ಡಬ್ಬಿಗಳ ಕಳ್ಳತನ ಸೇರಿದಂತೆ ಇತರೇ ಅಪರಾಧ ಚಟುವಟಿಕೆಗಳು ಹೆಚ್ಚಿದ್ದರಿಂದ ಪಂಚಾಯತ್ ವತಿಯಿಂದ ಈ ಹೊಸ ಪ್ರಯತ್ನ ನಡೆಸಲಾಗಿತ್ತು. ಇದರ ಆಧಾರದಲ್ಲಿ ಕೆಲವು ಅಪರಾಧ ಪ್ರಕರಣ ಪತ್ತೆಯೂ ಆಗಿತ್ತು. ತ್ಯಾಜ್ಯ ತಂದು ಹಾಕಿದವರನ್ನು ಗುರುತಿಸಿ ಅವರಿಂದಲೇ ಮತ್ತೆ ಹೆಕ್ಕಿಸಿದ ಪ್ರಸಂಗವೂ ನಡೆದಿತ್ತು.

ಎಲ್‌ಐಸಿ ಯವರು ಹಾಕಿದ್ದ ಲ್ಯಾಂಪ್ ಕಳ್ಳತನವಾಗಿತ್ತು; ಹಲವು ವರ್ಷಗಳ ಹಿಂದೆ ಎಲ್‌ಐಸಿ ವತಿಯಿಂದ ಇದೇ ಈ‌ ಸೀಟು ಭಾಗದಲ್ಲಿ ಬ್ಯಾಟರಿ ಸ್ಟ್ಯಾಂಡ್ ಸಹಿತ ಬೀದಿ ದೀಪ ಅಳವಡಿಸಲಾಗಿದ್ದುದನ್ನು ಬ್ಯಾಟರಿ ಸಹಿತ ಯಾರೋ‌ ಕಳ್ಳರು ಕದ್ದೊಯ್ದಿದ್ದರು. ಇದೀಗ ಭದ್ರತೆಯ ದೃಷ್ಟಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮರಾವನ್ನೂ‌ ಕೂಡ ಕಳ್ಳರು ಕದ್ದೊಯ್ದಿದ್ದಾರೆ.

Related posts

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya
error: Content is protected !!