22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

ಬೆಳ್ತಂಗಡಿ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ರಕ್ಷಿತಾರಣ್ಯದ ಬಸ್ಟ್ಯಾಂಡ್ ಪಕ್ಕದಲ್ಲಿ ಪಂಚಾಯತ್ ವತಿಯಿಂದ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಎ.9 ರಂದು ರಾತ್ರಿ ಯಾರೋ ಕಳ್ಳರು ಎಗರಿಸಿದ್ದಾರೆ.


ಒಂದು ತಿಂಗಳ ಹಿಂದೆ ಗ್ರಾಮದ ಆಯ್ದ ನಾಲ್ಕು ಕಡೆ ಸೂಕ್ಷ್ಮ ಪ್ರದೇಶದಲ್ಲಿ ಸೋಲಾರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.
ತಿಂಗಳ ಅಂತರದಲ್ಲೇ ಇದೀಗ ಒಂದು ಕ್ಯಾಮರಾವನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಗ್ರಾಮದಲ್ಲಿ ಅಲ್ಲಲ್ಲಿ ತ್ಯಾಜ್ಯ ತಂದೆಸೆಯುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಳಿ ಹರಿಕೆ ಡಬ್ಬಿಗಳ ಕಳ್ಳತನ ಸೇರಿದಂತೆ ಇತರೇ ಅಪರಾಧ ಚಟುವಟಿಕೆಗಳು ಹೆಚ್ಚಿದ್ದರಿಂದ ಪಂಚಾಯತ್ ವತಿಯಿಂದ ಈ ಹೊಸ ಪ್ರಯತ್ನ ನಡೆಸಲಾಗಿತ್ತು. ಇದರ ಆಧಾರದಲ್ಲಿ ಕೆಲವು ಅಪರಾಧ ಪ್ರಕರಣ ಪತ್ತೆಯೂ ಆಗಿತ್ತು. ತ್ಯಾಜ್ಯ ತಂದು ಹಾಕಿದವರನ್ನು ಗುರುತಿಸಿ ಅವರಿಂದಲೇ ಮತ್ತೆ ಹೆಕ್ಕಿಸಿದ ಪ್ರಸಂಗವೂ ನಡೆದಿತ್ತು.

ಎಲ್‌ಐಸಿ ಯವರು ಹಾಕಿದ್ದ ಲ್ಯಾಂಪ್ ಕಳ್ಳತನವಾಗಿತ್ತು; ಹಲವು ವರ್ಷಗಳ ಹಿಂದೆ ಎಲ್‌ಐಸಿ ವತಿಯಿಂದ ಇದೇ ಈ‌ ಸೀಟು ಭಾಗದಲ್ಲಿ ಬ್ಯಾಟರಿ ಸ್ಟ್ಯಾಂಡ್ ಸಹಿತ ಬೀದಿ ದೀಪ ಅಳವಡಿಸಲಾಗಿದ್ದುದನ್ನು ಬ್ಯಾಟರಿ ಸಹಿತ ಯಾರೋ‌ ಕಳ್ಳರು ಕದ್ದೊಯ್ದಿದ್ದರು. ಇದೀಗ ಭದ್ರತೆಯ ದೃಷ್ಟಿಯಿಂದ ಹಾಕಲಾಗಿದ್ದ ಸಿಸಿ ಕ್ಯಾಮರಾವನ್ನೂ‌ ಕೂಡ ಕಳ್ಳರು ಕದ್ದೊಯ್ದಿದ್ದಾರೆ.

Related posts

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

“ತೂಗುಸೇತುವೆಗಳ ಸರದಾರ” ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ನಿಧನ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya
error: Content is protected !!