26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

ಕೊಕ್ಕಡ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ, ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರು ಇವರ ಸಹಯೋಗದಲ್ಲಿ 5ನೇ ತರಗತಿಯಿಂದ 9ನೇ ತರಗತಿಯ ಮಕ್ಕಳ ಬೇಸಿಗೆ ಶಿಬಿರವು ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಎ.10 ರಂದು ಆರಂಭಗೊಂಡಿದ್ದು ಉಜಿರೆಯ ಗಣೇಶ್ ಪ್ರಸಾದ್ ಮೋಟರ್ ಡ್ರೈವಿಂಗ್ ಸ್ಕೂಲ್ ನ ಮಾಲಕ ರಾಮದಾಸ್ ಭಂಡಾರ್ಕರ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ವಹಿಸಿದ್ದರು.

ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕಿ ಮನೋರಮ, ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಶ್ರೀರಾಮ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಫಣಿರಾಜ್ ಜೈನ್ ಉಪಸ್ಥಿತರಿದ್ದರು.

ಚಂದ್ರಶೇಖರ ಪುತ್ತೂರು ರವರು ಪ್ರಾಚೀನ ಹಾಗೂ ಸಾಂಸ್ಕೃತಿಯ ಭಾರತ ಭೂಪಟ ಪರಿಚಯ, ರೇಣುಕಾ ಸುಧೀರ್ ರವರು ಕಥಾ ಅವಧಿ, ಪ್ರೊ. ಮಧೂರು ಮೋಹನ ಕಲ್ಲೂರಾಯರು ಗಮಕ ಪರಿಚಯ ಮತ್ತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ವಿದ್ಯಾರ್ಥಿಗಳ ಸರಸ್ವತಿ ವಂದನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಭವ್ಯ ಪಿ. ಡಿ. ಸ್ವಾಗತಿಸಿದರು. ಮೇಘಶ್ರೀ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು. ವಿಂದ್ಯಾ ಪಿ.ಎಸ್ ವಂದಿಸಿದರು.

ಶಿಬಿರವು ಏ. 14ರವರೆಗೆ ನಡೆಯಲಿದ್ದು, ಇಂದು (ಎ.11) 2 ನೇ ದಿನದ ಶಿಬಿರವನ್ನು ನಿವೃತ್ತ ಶಿಕ್ಷಕ ಕುಂಞಪ್ಪ ಗೌಡ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಸದಸ್ಯ ಶಾಂತಪ್ಪ ಮಡಿವಾಳ ಉಪಸ್ಥಿತರಿದ್ದರು.

Related posts

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!